ಶಿವಮೊಗ್ಗ: ಜನವಸತಿ ಪ್ರದೇಶದಲ್ಲಿ ಅಕ್ರಮವಾಗಿ ಪಟಾಕಿ ಮಾರುತ್ತಿದ್ದ ಅಂಗಡಿಗಳ ಮೇಲೆ ಪೊಲೀಸ್ ದಾಳಿ

Update: 2023-11-13 06:48 GMT

ಶಿವಮೊಗ್ಗ: ಜನವಸತಿ ಪ್ರದೇಶದಲ್ಲಿ ಅಕ್ರಮವಾಗಿ ಪಟಾಕಿ ಮಾರುತಿದ್ದ ಅಂಗಡಿಗಳ ಮೇಲೆ ಶಿವಮೊಗ್ಗ ನಗರದ ಗಾಂಧಿ ಬಝಾರ್‌ನಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.

ಗಾಂಧಿ ಬಬಝಾರ್‌ನಲ್ಲಿ ರಮೇಶ್ ಎನ್ನುವವರು ಅಕ್ರಮವಾಗಿ ಪಟಾಕಿ ಮಾರುತ್ತಿದ್ದ ವೇಳೆ ಶಿವಮೊಗ್ಗ ತಹಶಿಲ್ದಾರ್ ನಾಗರಾಜ್ ನೇತೃತ್ವದಲ್ಲಿ ದೊಡ್ಡಪೇಟೆ ಪೊಲೀಸರು ದಾಳಿ  ನಡೆಸಿ, 50 ಸಾವಿರ ರೂಪಾಯಿ ಮೌಲ್ಯದ ಪಟಾಕಿಯನ್ನು ವಶಕ್ಕೆ ಪಡೆದಿದ್ದಾರೆ.

ಮುಂಚಿತವಾಗಿಯೇ ಯಾವುದೇ ಅಹಿತಕರ ಘಟನೆಗಳು ತಡೆಯಲು ಜಿಲ್ಲಾಡಳಿತ  ಫ್ರೀಡಂ ಪಾರ್ಕ್ ನಲ್ಲಿ ಪಟಾಕಿ ಮಾರಾಟ ಮಾಡಲು ಅವಕಾಶ ಕಲ್ಪಿಸಿತ್ತು. ಜಿಲ್ಲಾಡಳಿತದ ಆದೇಶವಿದ್ದರೂ ಜನ‌ ನಿಬಿಡ ಪ್ರದೇಶದಲ್ಲಿ ಅಕ್ರಮ ಪಟಾಕಿ ಮಾರಾಟ ಮಾಡುತ್ತಿದ್ದ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News