ಶಿರೂರು ಗುಡ್ಡ ಕುಸಿತ ಪ್ರಕರಣ | ಹೈಕೋರ್ಟ್‌ಗೆ ವರದಿ ಸಲ್ಲಿಸಿದ ಕೇಂದ್ರ ಸರಕಾರ

Update: 2024-07-24 10:57 GMT

ಬೆಂಗಳೂರು : ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಗುಡ್ಡ ಕುಸಿತ ಪ್ರಕರಣದ ವರದಿಯನ್ನು ಕೇಂದ್ರ ಸರಕಾರ ಹೈಕೋರ್ಟ್‌ಗೆ ಸಲ್ಲಿಸಿದೆ.

ವಕೀಲ ಸಿಜಿ ಮಲಾಯಿಲ್, ಸುಭಾಷ್ ಚಂದ್ರನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ನಡೆಯಿತು. ಈ ವೇಳೆ ಈವರೆಗೆ ಕೈಗೊಂಡ ಕ್ರಮದ ಬಗ್ಗೆ ವರದಿಯನ್ನು ಕೇಂದ್ರ ಸರ್ಕಾರ ಸಲ್ಲಿಸಿತು. ಅಲ್ಲದೆ, ಈವರೆಗೆ 8 ಮೃತದೇಹಗಳು ಪತ್ತೆಯಾಗಿವೆ ಎಂದು ಎಎಸ್‌ಜಿ ಅರವಿಂದ್ ಕಾಮತ್ ಮಾಹಿತಿ ನೀಡಿದರು. ಹಾಗೆಯೇ ರಕ್ಷಣಾ ಕಾರ್ಯಾಚರಣೆ ಇನ್ನೂ ಮುಂದುವರಿದಿರುವುದಾಗಿ ಪೀಠಕ್ಕೆ ತಿಳಿಸಿದರು.

ಇನ್ನು, ರಾಜ್ಯ ಸರಕಾರದ ವರದಿ ಸಲ್ಲಿಕೆಗೆ ಕಾಲಾವಕಾಶ ಕೋರಿರುವ ಹಿನ್ನೆಲೆಯಲ್ಲಿ ವಿಚಾರಣೆ ಆ.1ಕ್ಕೆ ಹೈಕೋರ್ಟ್ ಮುಂದೂಡಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News