ಸಿಎ ಸೈಟ್ ಹಿಂತಿರುಗಿಸಲು ನಿರ್ಧರಿಸಿದ ಖರ್ಗೆ ಕುಟುಂಬದ ಸಿದ್ಧಾರ್ಥ ವಿಹಾರ ಟ್ರಸ್ಟ್
Update: 2024-10-13 08:51 GMT
ಬೆಂಗಳೂರು : ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಸಿದ್ದಾರ್ಥ ವಿಹಾರ ಟ್ರಸ್ಟ್ಗೆ ನೀಡಿರುವ ಕೆಐಎಡಿಬಿ ಸಿಎ ಸೈಟ್ ವಾಪಸ್ ನೀಡಲು ತೀರ್ಮಾನಿಸಲಾಗಿದೆ. ಖರ್ಗೆ ಕುಟುಂಬವು ಈ ಸೈಟ್ಗಳನ್ನು ವಾಪಸ್ ನೀಡಲು ನಿರ್ಧರಿಸಿದೆ.
ರವಿವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಸೈಟ್ ಹಿಂದಿರುಗಿಸುವ ಬಗ್ಗೆ ಮಾಹಿತಿ ನೀಡಿದ್ದಾರೆ.
"ಸಿಎ ಸೈಟ್ ಕಾನೂನು ಬಾಹಿರವಾಗಿ ಹಂಚಿಕೆಯಾಗಿದೆ ಎಂಬ ಆರೋಪವಿತ್ತು. ಹೀಗಾಗಿ ಕೆಐಎಡಿಬಿ ಹಂಚಿಕೆ ಮಾಡಿದ್ದ ಭೂಮಿ ವಾಪಸ್ ಮಾಡಲು ನಮ್ಮ ಅಣ್ಣ ನಿರ್ಧರಿಸಿದ್ದಾರೆ. ನಮ್ಮ ಕುಟುಂಬದಲ್ಲಿ ಮೂವರು ಮಾತ್ರ ರಾಜಕೀಯದಲ್ಲಿ ಇದ್ದೇವೆ. ಸೆ.29 ರಂದು ನಮ್ಮ ಅಣ್ಣ ಕೆಐಎಡಿಬಿಗೆ ಪತ್ರ ಬರೆದಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.