ಬಜೆಟ್ ಮಂಡನೆ ವೇಳೆ ಶಾಸಕರ ಆಸನದಲ್ಲಿ ಕುಳಿತಿದ್ದ ವ್ಯಕ್ತಿ ಪೊಲಿಸ್ ವಶಕ್ಕೆ

Update: 2023-07-07 15:35 GMT

ಪೊಲೀಸ್ ವಶದಲ್ಲಿ ವ್ಯಕ್ತಿ

ಬೆಂಗಳೂರು: ಮುಖ್ಯ ಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸುತ್ತಿದ್ದ ಸಂದರ್ಭದಲ್ಲಿ ವಿಧಾನಸಭೆ ಪ್ರವೇಶ ಮಾಡಿ, ಸುಮಾರು ಹದಿನೈದು ನಿಮಿಷಗಳ ಕಾಲ ಸದನದಲ್ಲಿ ಕುಳಿತುಕೊಂಡಿದ್ದ ಆರೋಪದಡಿ ವಕೀಲ ತಿಪ್ಪೇರುದ್ರಪ್ಪ (76) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

ಇದು ಮಾಧ್ಯಮಗಳಲ್ಲಿ ಸುದ್ದಿಯಾದ ಕೂಡಲೇ ಎಚ್ಚೆತ್ತುಕೊಂಡ ವಿಧಾನಸಭೆಯ ಪೊಲೀಸರು, ಸದನದ ಒಳಗಡೆ ಪ್ರವೇಶಿಸಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ.

ವ್ಯಕ್ತಿಯನ್ನು ತಿಪ್ಪೆರುದ್ರಸ್ವಾಮಿ ಎಂದು ಗುರುತು ಹಿಡಿಯಲಾಗಿದೆ. ಇವರು ಮೂಲತಃ ಚಿತ್ರದುರ್ಗ ಜಿಲ್ಲೆಯವರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಶುಕ್ರವಾರ ಮಧ್ಯಾಹ್ನ 12ಗಂಟೆಗೆ ಕಲಾಪ ಆರಂಭಗೊಂಡಾಗ ಆಡಳಿತ ಮತ್ತು ಪ್ರತಿಪಕ್ಷಗಳ ಸಾಲಿನಲ್ಲಿ ಸದಸ್ಯರ ಹಾಜರಾತಿ ಕಡಿಮೆ ಇತ್ತು. ಈ ವೇಳೆ ಶಾಸಕರಂತೆ ನಟಿಸಿದ ವಕೀಲ ತಿಪ್ಪೇರುದ್ರಪ್ಪ ಆಡಳಿತ ಪಕ್ಷದ ಸದಸ್ಯರ ಆಸನದಲ್ಲಿ 15 ನಿಮಿಷಗಳ ಕಾಲ ಕೂತು ಬಜೆಟ್ ಮಂಡನೆಯನ್ನು ಆಲಿಸಿ ಹೊರಗೆ ಹೋಗಿದ್ದಾರೆ. ಈ ವೇಳೆ ಕಲಬುರಗಿ ಜಿಲ್ಲೆಯ ಗುರುಮಿಟ್ಕಲ್ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಸದಸ್ಯ ಶರಣಗೌಡ ಕಂದಕೂರು ಅವರು, ಅಪರಿಚತ ವ್ಯಕ್ತಿಯನ್ನು ಗಮನಿಸಿ ಸಂಶಯಗೊಂಡು ತಮ್ಮ ಪಕ್ಕದಲ್ಲಿದ್ದ ಶಾಸಕರಿಗೆ ‘ಅಲ್ಲಿ ಕೂತಿರುವವರು ಯಾರು’ ಎಂಬುದು ತಿಳಿಯುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ. ಆದರೆ, ಅವರೂ, ‘ನಮಗೆ ಗೊತ್ತಿಲ್ಲ’ ಎಂದು ಹೇಳಿದಾಗ, ತಕ್ಷಣವೇ ಸ್ಪೀಕರ್ ಯು.ಟಿ.ಖಾದರ್ ಅವರ ಗಮನಕ್ಕೆ ತಂದಿದ್ದರು. 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News