ಕೆಟ್ಟ ಸಂಪ್ರದಾಯಕ್ಕೆ ಮುನ್ನುಡಿ ಬರೆಯಲಾರೆ : ಸ್ಪೀಕರ್ ಯು.ಟಿ.ಖಾದರ್

Update: 2024-07-25 12:48 GMT

ಬೆಂಗಳೂರು : ವಿಧಾನಸಭೆಯ ನಿಯಮಾವಳಿಗಳನ್ವಯ ಕಲಾಪ ನಡೆಸುತ್ತೇನೆ. ಸ್ಪೀಕರ್ ಆಗಿ ನಾನು ಯಾವುದೇ ಕಾರಣಕ್ಕೂ ಕೆಟ್ಟ ಸಂಪ್ರದಾಯಕ್ಕೆ ಮುನ್ನುಡಿ ಬರೆಯಲಾರೆ. ರಾಜಕೀಯ ಪಕ್ಷಗಳ ನಡುವೆ ಆರೋಪ-ಪ್ರತ್ಯಾರೋಪ ಸಹಜ. ಕಾರ್ಯಕಲಾಪ ಪಟ್ಟಿ ಅನ್ವಯವೇ ಸದನವನ್ನು ನಡೆಯುತ್ತದೆ ಎಂದು ಸ್ಪೀಕರ್ ಯು.ಟಿ.ಖಾದರ್ ಅವರು ಸ್ಪಷ್ಟಪಡಿಸಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಮುಡಾ ನಿವೇಶನ ಹಂಚಿಕೆ ಅಕ್ರಮ ಖಂಡಿಸಿ ಬಿಜೆಪಿ-ಜೆಡಿಎಸ್ ಅಹೋರಾತ್ರಿ ಧರಣಿ ನಡೆಸುತ್ತಿದ್ದು, ಅವರ ಪ್ರಸ್ತಾಪಿಸಿದ ಎಲ್ಲ ವಿಚಾರಗಳ ಚರ್ಚೆಗೆ ಅವಕಾಶ ಕಲ್ಪಿಸಲಾಗಿದೆ. ವಾಲ್ಮೀಕಿ ನಿಗಮದ ಅಕ್ರಮಕ್ಕೆ ಸಂಬಂಧಿಸಿದಂತೆ ಸುದೀರ್ಘ ಚರ್ಚೆ ಮಾಡಲಾಗಿದೆ. ವಿಧೇಯಕಗಳ ಮಂಡನೆ, ಅನುಮೋದನೆ ಬಾಕಿ ಇವೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News