ಮತ್ತೊಮ್ಮೆ ಮೋದಿ ಸರಕಾರ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಪತನ: ಆರ್.ಅಶೋಕ್

Update: 2023-08-29 14:23 GMT

ಬೆಂಗಳೂರು, ಆ.29: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರದಲ್ಲಿ ಮತ್ತೊಮ್ಮೆ ಸರಕಾರ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿರುವ ಸರಕಾರ ಪತನವಾಗಲಿದೆ. ಈ ಭಯ ಕಾಂಗ್ರೆಸ್ ನಾಯಕರಲ್ಲಿದೆ ಎಂದು ಬಿಜೆಪಿ ಶಾಸಕ ಆರ್.ಅಶೋಕ್ ಹೇಳಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಆದ ಮೇಲೆ ಈ ಸರಕಾರ ಇರಲ್ಲ ಎಂಬ ಭಯ ಕಾಂಗ್ರೆಸ್‍ಗೆ ಉಂಟಾಗಿದೆ. ರಾಜ್ಯ ಸರಕಾರಕ್ಕೆ ನೂರು ದಿನಗಳ ಕರಾಳ ದಿನ. ಅವರ ಅವಧಿಯಲ್ಲಿ ಒಂದೇ ಒಂದು ಅಭಿವೃದ್ಧಿ ಕಾರ್ಯಗಳು ರಾಜ್ಯದಲ್ಲಿ ಆಗುತ್ತಿಲ್ಲ. ಎಲ್ಲ ಕಡೆ ಗುತ್ತಿಗೆದಾರರು ಕೆಲಸನಿಲ್ಲಿಸಿದ್ದಾರೆ. ಕಳೆದ‌ ನೂರುದಿನಗಳಲ್ಲಿ ಅಭಿವೃದ್ಧಿ ಕುಂಠಿತ ಅಲ್ಲ, ಸ್ಥಗಿತ ಆಗಿದೆ ಎಂದು ಟೀಕಿಸಿದರು.

ನಮ್ಮ ಆಡಳಿತಾವಧಿಯಲ್ಲಿಸರಕಾರ ಎಲ್ಲಿಗೆನಿಂತಿತ್ತೋ ಅಲ್ಲೇ ಈ ಸರಕಾರನಿಂತಿದೆ. ಹೊಸ ಯೋಜನೆಗಳಿಗೆ ಎಲ್ಲೂ ಚಾಲನೆ ನೀಡಲಾಗಿಲ್ಲ. ಬೆಂಗಳೂರಿನಂತ ನಗರದಲ್ಲೇ ಲೋಡ್ ಶೆಡ್ಡಿಂಗ್, ಉಚಿತ ವಿದ್ಯುತ್ ನೀಡಲು ಲೋಡ್ ಶೆಡ್ಡಿಂಗ್, ಅಭಿವೃದ್ಧಿ ಪರವಾಗಿ ಕಾಂಗ್ರೆಸ್‍ನಾಯಕರಿಂದ ಒಂದೇ ಒಂದುಹೇಳಿಕೆ ಇಲ್ಲ. ರಾಜ್ಯದ ಎಲ್ಲ ಗುತ್ತಿಗೆದಾರರುಪ್ರತಿಭಟನೆಮಾಡುತ್ತಿದ್ದಾರೆ ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News