ರಾಜ್ಯ ಸರಕಾರ ಅಲ್ಪಸಂಖ್ಯಾತರಿಗೆ ಕಾಣಿಕೆ ಮೇಲೆ ಕಾಣಿಕೆ ನೀಡುತ್ತಿದೆ: ವಿಪಕ್ಷ ನಾಯಕ ಆರ್.ಅಶೋಕ್

Update: 2023-12-30 09:06 GMT

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರ ಅಲ್ಪಸಂಖ್ಯಾತರಿಗೆ ಕಾಣಿಕೆ‌ಯ ಮೇಲೆ ಕಾಣಿಕೆ ನೀಡುತ್ತಿದೆ. ಆದರೆ ಬರಗಾಲದಿಂದ ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ನೀಡಿಲ್ಲಎಂದು ವಿಪಕ್ಷ ನಾಯಕ ಆರ್.‌ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. 

ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು ಸಂಕಷ್ಟದಲ್ಲಿದ್ದಾರೆ. 500ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಷ್ಟೆಲ್ಲಾ ಇದ್ದರೂ ಕೂಡ ಮುಖ್ಯಮಂತ್ರಿಗಳು  ಕಣ್ಣು ಕಾಣದ ರೀತಿ ಅಲ್ಪಸಂಖ್ಯಾತರಿಗೆ ಬಂಪರ್ ಮೇಲೆ ಬಂಪರ್ ನೀಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಮ್ಮ ರಾಜ್ಯದಲ್ಲಿ ಅಭಿವೃದ್ಧಿಗೆ ಸಿಗೋದೇ 5000 ಕೋಟಿ ರೂ., ಅದರಲ್ಲಿ  1 ಸಾವಿರ ಕೋಟಿ ರೂ. ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ ಕೊಟ್ಟಿದ್ದಾರೆ. ಇದರಿಂದ ಹಿಂದೂಗಳೇನು, ದಲಿತರೇನು ಮಾಡಬೇಕು?. ಕೇವಲ ಲೋಕಸಭೆ ಚುನಾವಣೆಗೆ ಓಲೈಕೆ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News