ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿದ ದುಷ್ಕರ್ಮಿಗಳ ವಿರುದ್ದ ಕಠಿಣ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Update: 2024-01-23 14:08 GMT

ಕಲಬುರಗಿ: ನಗರದ ಕೋಟನೂರು ಬಡಾವಣೆಯಲ್ಲಿ ನಿನ್ನೆ ತಡರಾತ್ರಿ ದುಷ್ಕರ್ಮಿಗಳು ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ದುಷ್ಕರ್ಮಿಗಳ ವಿರುದ್ದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು. ಯಾರೂ ಉದ್ವೇಗಕ್ಕೆ ಒಳಗಾಗದಂತೆ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಮನವಿ ಮಾಡಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಫೇಸ್‌ ಬುಕ್‌ ನಲ್ಲಿ ಬರೆದುಕೊಂಡಿರುವ ಅವರು, ಬೆಂಗಳೂರಿನಲ್ಲಿ ಪೊಲೀಸ್ ಮಹಾನಿರ್ದೇಶಕರ ಸಭೆಗಾಗಿ ಆಗಮಿಸಿದ್ದ ನಗರ ಪೊಲೀಸ್ ಆಯುಕ್ತರು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಕೂಡಲೇ ಕಲಬುರಗಿಗೆ ವಾಪಸ್ ಕಳುಹಿಸಿ ಈ ಪ್ರಕರಣದ ಕುರಿತು ತೀವ್ರಗತಿಯಲ್ಲಿ ತನಿಖೆ ನಡೆಸಿ ಆದಷ್ಟು ಶೀಘ್ರವಾಗಿ ಅಪರಾಧಿಗಳನ್ನು ಬಂಧಿಸುವಂತೆ ಈಗಾಗಲೇ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.

ಸಮಾನತೆಗಾಗಿ ತಮ್ಮ ಜೀವನವನ್ನೇ ಸವೆಸಿ ಇಡೀ ದೇಶದ ಶೋಷಿತ ಸಮುದಾಯಗಳಿಗೆ ಬದುಕುವ ಹಕ್ಕನ್ನು ಕೊಟ್ಟ ಮಹಾತ್ಮನಿಗೂ ಅಪಮಾನ ಮಾಡಿದವರಿಗೆ ತಕ್ಕ ಶಿಕ್ಷೆ ನೀಡುವ ಕೆಲಸವನ್ನು ಖಂಡಿತ ಮಾಡಲಿದ್ದೇವೆ. ಈ ಸಂದರ್ಭದಲ್ಲಿ ಯಾರೂ ಕೂಡ ಉದ್ವೇಗಕ್ಕೆ ಒಳಗಾಗದೇ ಸಮಾಜದಲ್ಲಿ ಶಾಂತಿ ಕಾಪಾಡುವಂತೆ ಕಳಕಳಿಯಿಂದ ಮನವಿ ಮಾಡುತ್ತೇನೆ ಎಂದು ಬರೆದುಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News