ಬಿಲ್ಕಿಸ್ ಬಾನು ಪ್ರಕರಣದಲ್ಲಿ ಸುಪ್ರೀಂ ತೀರ್ಪು ಕಗ್ಗತ್ತಲ‌ ಕಾಲದಲ್ಲಿ ನ್ಯಾಯದ ಬೆಳಕಿನ ಬಾಗಿಲು ತೆರೆದಂತೆ: ಬಿ.ಕೆ ಹರಿಪ್ರಸಾದ್‌

Update: 2024-01-08 11:03 GMT

ಬೆಂಗಳೂರು: "ಬಿಲ್ಕಿಸ್ ಬಾನು ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿದ ತೀರ್ಪು ಕಗ್ಗತ್ತಲ‌ ಕಾಲದಲ್ಲಿ ನ್ಯಾಯದ ಬೆಳಕಿನ ಬಾಗಿಲು ತೆರೆದಂತಿದೆ" ಎಂದು ಕಾಂಗ್ರೆಸ್‌ ವಿಧಾನ ಪರಿಷತ್‌ ಸದಸ್ಯ ಬಿ.ಕೆ ಹರಿಪ್ರಸಾದ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ʼಎಕ್ಸ್‌ʼ ನಲ್ಲಿ ಬರೆದುಕೊಂಡಿರುವ ಅವರು, "ಅತ್ಯಾಚಾರಿಗಳ ಪರ ವಕಲಾತ್ತು ವಹಿಸಿದ್ದ ಗುಜರಾತಿನ ಪ್ರಭುತ್ವಕ್ಕೆ ಸುಪ್ರೀಂಕೋರ್ಟ್ ಛೀಮಾರಿ ಹಾಕಿದೆ. ಹೆಣ್ತನದ ಆತ್ಮಾಭಿಮಾನ ಹಾಗೂ ನ್ಯಾಯಾಂಗದ ನಂಬಿಕೆ ಉಳಿಸಿದ ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇನೆ ಎಂದು ಪೋಸ್ಟ್‌ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News