ಕಾವೇರಿ ನದಿಗೆ ಹಾರಿ ನಂಜನಗೂಡು ದೇವನೂರು ಮಠದ ಸ್ವಾಮೀಜಿ ಆತ್ಮಹತ್ಯೆ

Update: 2023-07-10 16:19 GMT

ಮೈಸೂರು,ಜು.10: ಜಿಲ್ಲೆಯ ನಂಜನಗೂಡು ತಾಲೂಕು ದೇವನೂರು ಮಠದ ಸ್ವಾಮೀಜಿಯೊಬ್ಬರು ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಟಿ.ನರಸೀಪುರ ತಾಲೂಕಿನ ಮುಡುಕುತೊರೆ ಗ್ರಾಮದ ಬಳಿ ಸೋಮವಾರ ವರದಿಯಾಗಿದೆ. 

ದೇವನೂರು ಮಠದ ಶ್ರೀಶಿವಪ್ಪ ಸಾಮೀಜಿ ಆತ್ಮಹತ್ಯೆ ಮಾಡಿಕೊಂಡ ಸ್ವಾಮೀಜಿ ಎಂದು ಗುರುತಿಸಲಾಗಿದೆ.

ದೇವನೂರು ಶ್ರೀ ಗುರು ಮಲ್ಲೇಶ್ವರ ಮಠಾಧ್ಯಕ್ಷರಾದ ಶ್ರೀ ಮಹಾಂತ ಸ್ವಾಮಿಗಳವರ ಶಿಷ್ಯ ರಾಗಿದ್ದ ಸ್ವಾಮಿಗಳು ಕಳೆದ 40 ವರ್ಷಗಳಿಂದ ಶ್ರೀಮಠದಲ್ಲಿ ಒಣ ಭಿಕ್ಷೆ, ಕಾಯಕದಲ್ಲಿ ತೊಡಗಿಸಿಕೊಂಡಿದ್ದರು. ಇತ್ತೀಚೆಗೆ ಕಿವಿ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ಶ್ರೀಗಳು ಖಿನ್ನತೆಗೆ ಒಳಗಾಗಿ ಕಳೆದ ಕೆಲವು ದಿನಗಳಿಂದ ಮಠದಿಂದ ಕಾಣೆಯಾಗಿದ್ದರು ಎಂದು ಹೇಳಲಾಗಿದೆ.

ಟಿ ನರಸೀಪುರ ತಾಲೂಕಿನ ಮುಡುಕುತೊರೆ ಬಳಿ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ವಾಮೀಜಿ ಮೃತದೇಹ ಸೋಮವಾರ ಟಿ.ನರಸೀಪುರದ ಬಳಿ ನದಿಯಲ್ಲಿ ದೊರೆತಿದೆ.

ಶ್ರೀ ಮಠದ ಮಠಾಧ್ಯಕ್ಷರಾದ ಮಹಾಂತ ಸ್ವಾಮಿಗಳು ಸೇರಿದಂತೆ ದೇವನೂರಿನ ಪ್ರಮುಖರು ಹಾಗು ಮಠದ ಭಕ್ತರುಶಿವಪ್ಪ ಸ್ವಾಮಿ ಸಾವಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News