ಮಾಜಿ ಸಚಿವ ಯೋಗೇಶ್ವರ್ ಬಾವ ಮಹದೇವಯ್ಯ ಅವರ ಮೃತದೇಹ ಪತ್ತೆ

Update: 2023-12-04 10:57 GMT

ಚಾಮರಾಜನಗರ: ಮೂರು ದಿನಗಳ ಹಿಂದೆ ರಾಮನಗರ ಜಿಲ್ಲೆಯ ಚನ್ನಪಟ್ಟಣದಿಂದ ನಿಗೂಢವಾಗಿ ಕಾಣೆಯಾಗಿದ್ದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರ ಬಾವ ಮಹದೇವಯ್ಯರ ಮೃತ ದೇಹ ಚಾಮರಾಜನಗರದ ರಾಮಾಪುರ ಸಮೀಪದ ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದೆ.

ಈ ಸಂಬಂಧ ಮಹದೇವಯ್ಯ ಬಳಸುತ್ತಿದ್ದ ಕಾರು ನಿನ್ನೆ(ಡಿ.3) ರಾತ್ರಿ ರಾಮಾಪುರದ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ಪತ್ತೆಯಾಗಿದ್ದು, ಅವರರ ಸುಳಿವು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದರು. ಅದರೆ ಇಂದು ಅಲ್ಲಿನ ನಿರ್ಜನ ಪ್ರದೇಶದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಮಹದೇವಯ್ಯರ ಅವರ ಮೃತದೇಹ ಪತ್ತೆಯಾಗಿದೆ.

ಏನಿದು ಘಟನೆ?

ಚನ್ನಪಟ್ಟಣ ತಾಲೂಕಿನ ಚಕ್ಕರೆ ಗ್ರಾಮದ ಮಹದೇವಯ್ಯ ತಮ್ಮ ತೋಟದ ಮನೆಯಿಂದ ಮೂರು ದಿನಗಳ ಹಿಂದೆ ನಿಗೂಢವಾಗಿ ಕಾಣೆಯಾಗಿದ್ದರು. ಆರಂಭದಲ್ಲಿ ಅವರನ್ನು ಯಾರೋ ಅಪಹರಿಸಿರುವ ಶಂಕೆ ವ್ಯಕ್ತವಾಗಿತ್ತು. ಈ ಬಗ್ಗೆ ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News