ಡಿಸಿಎಂ ಹುದ್ದೆ ಸೃಷ್ಟಿಸುವ ವಿಚಾರ ಪಕ್ಷದ ನಿರ್ಧಾರ; ನಾನಂತೂ ಆಕಾಂಕ್ಷಿ ಅಲ್ಲ: ಸಚಿವ ಸತೀಶ್ ಜಾರಕಿಹೊಳಿ

Update: 2023-09-17 15:56 GMT

ಬೆಳಗಾವಿ, ಸೆ.17: ಮೂರು ನೂತನ ಉಪಮುಖ್ಯಮಂತ್ರಿ (ಡಿಸಿಎಂ) ಹುದ್ದೆ ಸೃಷ್ಟಿಸುವ ವಿಚಾರವೂ ಪಕ್ಷ ಅಂತಿಮವಾಗಿ ನಿರ್ಧರಿಸಬೇಕು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸಿಎಂ ಹುದ್ದೆ ಸೃಷ್ಟಿಸುವ ವಿಚಾರ ಸಚಿವ ಕೆ.ಎನ್.ರಾಜಣ್ಣ ತಮ್ಮ ವಯಕ್ತಿಕ ಹೇಳಿಕೆ ನೀಡಿದ್ದಾರೆ. ನಾನಂತೂ ಡಿಸಿಎಂ ಸ್ಥಾನದ ಆಕಾಂಕ್ಷಿ ಅಲ್ಲ. ಆದರೆ, ಡಿಸಿಎಂ ಹುದ್ದೆ ಅವಶ್ಯಕತೆ ಇದೆಯೋ ಇಲ್ಲವೋ ಎಂಬುದನ್ನು ಪಕ್ಷ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.

ಜಿಲ್ಲಾ ವಿಭಜನೆ ವಿಚಾರದ ಬಗ್ಗೆ ಮಾತನಾಡಿ, ಕಾಲ ಬಂದೇ ಬರುತ್ತೆ ಆಗ ಮಾಡಿಸೋಣ. ಜಿಲ್ಲೆಯ ಬಹಳಷ್ಟು ಜನರು ಜಿಲ್ಲಾ ವಿಭಜನೆಗೆ ಆಸಕ್ತಿ ತೋರಿಸಿದ್ದೇವೆ. ಇದಕ್ಕೆ ಮೇಲಿನವರು, ಸರಕಾರದವರು ಹಸಿರು ನಿಶಾನೆ ಕೊಡಬೇಕು. ಗಡಿ ಉಸ್ತುವಾರಿ ಸಚಿವರ ನೇಮಕಾತಿ ಬಗ್ಗೆ, ಪ್ರತ್ಯೇಕವಾಗಿ ಆ ಸಚಿವರನ್ನು ನೇಮಕ ಮಾಡುವ ಅವಶ್ಯಕತೆ ಇಲ್ಲ. ಅದನ್ನು ಬೆಂಗಳೂರಿನಲ್ಲಿಯೇ ಕುಳಿತು ಮಾಡಬಹುದು ಎಂದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News