ಸೆಪ್ಟಂಬರ್‌ 1ಕ್ಕೆ ಮೈಸೂರಿಗೆ ಆಗಮಿಸಲಿವೆ ಗಜಪಡೆ; ದಸರಾ ಉದ್ಘಾಟನೆ ಮಾಡುವವರು ಯಾರು?

Update: 2023-08-07 17:10 GMT

ಮೈಸೂರು,ಆ.7: ಮೈಸೂರು ದಸರಾ 2023ರ ಗಜಪಯಣ ಸೆಪ್ಟೆಂಬರ್ 1ಕ್ಕೆ ನಡೆಯಲಿದೆ. ಗಜ ಪಡೆಯ ಮೊದಲ ಟೀಂ ಸೆಪ್ಟೆಂಬರ್ 1ಕ್ಕೆ ಮೈಸೂರಿಗೆ ಆಗಮಿಸಲಿವೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು.

ನಗರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೊದಲ ಹಂತದಲ್ಲಿ 14 ಆನೆಗಳು ಗಜ ಪಯಣದ ಮೂಲಕ ಮೂಲಕ ಮೈಸೂರಿಗೆ ಬರುತ್ತವೆ. ಹುಣಸೂರು ತಾಲೂಕಿನ ವೀರನ ಹೊಸಹಳ್ಳಿಯಲ್ಲಿ ಸಾoಪ್ರದಾಯಕವಾಗಿ ಗಜಪಡೆಗೆ ಸ್ವಾಗತ ಕೋರಲಾಗುತ್ತದೆ ಎಂದರು.

ದಸರಾಗೆ ವಿಶೇಷ ಅನುದಾನ ಕೇಳಿಲ್ಲ. ಅದ್ದೂರಿ ದಸರಾಗೆ ಬೇಕಾಗುವಷ್ಟು ಅನುದಾನ ಕೊಡುತ್ತೇವೆ. ದಸರಾ ಉದ್ಘಾಟಕರ ತೀರ್ಮಾನ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿದ್ದೇವೆ. ಸಿಎಂ ಅವರೇ ಉದ್ಘಾಟಕರ ಹೆಸರು ತೀರ್ಮಾನ ಮಾಡಲಿದ್ದಾರೆ ಎಂದು ಸಚಿವ ಡಾ.ಎಚ್.ಸಿ ಮಹದೇವಪ್ಪ ಹೇಳಿದರು.

ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನ ನಿಧನ ಹಿನ್ನಲೆ ಸಂತಾಪ ಸೂಚಿಸಿದ ಸಚಿವ ಡಾ.ಎಚ್.ಸಿ ಮಹದೇವಪ್ಪ. ಸಾವಿನ ದುಖ ಭರಿಸುವ ಶಕ್ತಿಯನ್ನ ಕುಟುಂಬಕ್ಕೆ ದೇವರು ನೀಡಲಿ ಎಂದು ಪ್ರಾರ್ಥನೆ ಮಾಡಿದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News