ಉಯ್ಯಾಲೆ ಆಡುತ್ತಿದ್ದಾಗ ಮಹಡಿಯಿಂದ ಬಿದ್ದು ಗಾಯಗೊಂಡಿದ್ದ ಶಿಕ್ಷಕಿ ಮೃತ್ಯು

Update: 2023-10-20 11:44 GMT

ಮೃತ ಶಿಕ್ಷಕಿ ಕೆ. ಪುಟ್ಟಿ

ಕೊಳ್ಳೇಗಾಲ (ಚಾಮರಾಜನಗರ), ಅ.20:  ಎರಡು ಅಂತಸ್ತಿನ ಮನೆಯ ಮೇಲೆ ರಾತ್ರಿ ವೇಳೆಯಲ್ಲಿ ಉಯ್ಯಾಲೆ ಆಡುತ್ತಿದ್ದಾಗ ಆಕಸ್ಮಿಕವಾಗಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದ ಶಿಕ್ಷಕಿಯೊಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿರುವುದು ವರದಿಯಾಗಿದೆ. 

ತೀವ್ರವಾಗಿ ಗಾಯಗೊಂಡಿದ್ದ ಕೊಳ್ಳೇಗಾಲ ಪಟ್ಟಣದ ಜಿಪಿ ಮಲ್ಲಪ್ಪ ಪುರ ನಿವಾಸಿ  ಶಿಕ್ಷಕಿ ಕೆ. ಪುಟ್ಟಿ (52) ಎಂಬುವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ರಾತ್ರಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. 

ಇವರು ಯಳಂದೂರು ತಾಲೂಕಿನ ಮಾಂಬಳ್ಳಿಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಇವರು ಮಂಗಳವಾರ ಸಂಜೆ ಮನೆಯ ಮೇಲೆ ಉಯ್ಯಾಲೆ ಆಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಕೆಳಗೆ ಬಿದ್ದಿದ್ದಾರೆ. ಬಿದ್ದ ತಕ್ಷಣ ಮನೆಯವರು ಅವರನ್ನು ಮೇಲೆತ್ತಿ ನಗರದ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದರು. ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.

ಈ ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡು ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ವಾರಸುದಾರರಿಗೆ ಹಸ್ತಾಂತರಿಸಲಾಗಿತು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News