ವಿಶ್ವವೇ ಮೋದಿ ಮತ್ತೊಮ್ಮೆ ಭಾರತದ ಪ್ರಧಾನಿಯಾಗಬೇಕೆಂದು ಬಯಸುತ್ತಿದೆ: ಶೋಭಾ ಕರಂದ್ಲಾಜೆ

Update: 2023-08-19 12:38 GMT

ಚಿಕ್ಕಮಗಳೂರು, ಆ.19: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಹೆಚ್ಚಿನ ಸ್ಥಾನದೊಂದಿಗೆ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಮಂತ್ರಿ ಮಾಡುವ ನಿಟ್ಟಿನಲ್ಲಿ ಪಕ್ಷ ತೊರೆದವರನ್ನು ಪಕ್ಷಕ್ಕೆ ಮರು ಸೇರ್ಪಡೆ ಮಾಡಿಕೊಂಡು ಪಕ್ಷವನ್ನು ಸದೃಢ ಮಾಡಬೇಕಾದ ಅಗತ್ಯವಿದೆ ಎಂದು ಕೇಂದ್ರ ಕೃಷಿ ಮತ್ತು ರಾಜ್ಯ ರೈತ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ದೇಶ ಮತ್ತು ವಿಶ್ವವೇ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕೆಂದು ಬಯಸುತ್ತಿದೆ. ವಿಶ್ವದ ಹಲವು ದೇಶಗಳು ಮೋದಿಯನ್ನು ಎದುರು ನೋಡುತ್ತಿವೆ. ಆದ್ದರಿಂದ ಭಾರತವನ್ನು ಮತ್ತಷ್ಟು ಗಟ್ಟಿ ಮಾಡಲು ಎಲ್ಲರ ಸಹಕಾರಬೇಕು'' ಎಂದರು.

'ರಾಜ್ಯದಲ್ಲಿ ಬಿಜೆಪಿ ಸರಕಾರ ರಚನೆ ಮಾಡಲು ಕೆಲ ಶಾಸಕರು, ಮುಖಂಡರು ಬಿಜೆಪಿ ಸೇರಿದ್ದರು. ಅವರನ್ನು ಬಿಜೆಪಿ ಅತ್ಯಂತ ಗೌರವದಿಂದ ನಡೆಸಿಕೊಂಡಿದೆ. ನಮ್ಮ ಸರಕಾರದ ಅವಧಿಯಲ್ಲಿ ಅವರಿಗೆ ದೊಡ್ಡ ಖಾತೆ ಕೊಡಲಾಗಿತ್ತು. ಅವರನ್ನ ದೊಡ್ಡ ಜಿಲ್ಲೆಗೆ ಉಸ್ತುವಾರಿ ಸಚಿವರನ್ನಾಗಿ ಮಾಡಲಾಗಿತ್ತು. ಪಕ್ಷದ ಎಲ್ಲಾ ಚಟುವಟಿಕೆಯಲ್ಲಿ ಅವರನ್ನು ತೊಡಗಿಸಿಕೊಳ್ಳಲಾಗಿತ್ತು ಎಂದ ಅವರು, ಇಂದು ರಾಜ್ಯದಲ್ಲಿ ನಮ್ಮ ಸರಕಾರವಿಲ್ಲ. ಚುನಾವಣೆಯಲ್ಲಿ ಬಿಜೆಪಿ ಸೋತಿದೆ, ಆ ಸೋಲಿನಲ್ಲಿ ಎಲ್ಲರ ಪಾಲು ಇದೆ' ಎಂದು ಹೇಳಿದರು.

'ಮತ್ತೆ ಬಿಜೆಪಿಯನ್ನ ಕಟ್ಟಬೇಕು ಅನ್ನೋದು ನಮ್ಮ ಅಪೇಕ್ಷೆ. ನಮ್ಮ ಪಕ್ಷದ ತತ್ವ ಸಿದ್ಧಾಂತ ಒಪ್ಪಿ ಅವರು ಬಿಜೆಪಿ ಸೇರಿದ್ದು, ಅವರು ಇಲ್ಲೇ ಇರುತ್ತಾರೆ. ಅಧಿಕಾರಕ್ಕಾಗಿ ಬಂದರು, ಅಧಿಕಾರ ಇಲ್ಲದಾಗ ಹೋದರು ಎಂಬ ಕೆಟ್ಟ ಹೆಸರನ್ನು ಯಾರೂ ತೆಗೆದುಕೊಳ್ಳಲ್ಲ ಅನ್ನುವ ವಿಶ್ವಾಸವಿದೆ. ಅಧಿಕಾರ ಇದ್ದಾಗ ಎಲ್ಲಾ ಅನುಭವಿಸಿದ್ದೇವೆ, ಈಗ ಬಿಜೆಪಿಯನ್ನ ಗಟ್ಟಿ ಮಾಡಬೇಕಾದ ಹೊಣೆಗಾಗಿರಿಕೆ ಎಲ್ಲರ ಮೇಲಿದೆ' ಎಂದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News