ತುಮಕೂರು | ಕೆಟ್ಟು ನಿಂತಿದ್ದ ಕ್ರೂಸರ್ ಗೆ ಟೆಂಪೊ ಢಿಕ್ಕಿ: ಇಬ್ಬರು ಮೃತ್ಯು

Update: 2023-11-09 04:58 GMT

Image Source : PTI

ತುಮಕೂರು, ನ.9: ಕೆಟ್ಟು ನಿಂತಿದ್ದ ಕ್ರೂಸರ್ ವಾಹನಕ್ಕೆ ಹಿಂಬದಿಯಿಂದ ಬಂದ ಟೆಂಪೊ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕೋರದ ರಾಷ್ಟ್ರೀಯ ಹೆದ್ದಾರಿ 4ರ ಸಮೀಪ ಇಂದು ಮುಂಜಾವ 3:30ರ ಸಮಯದಲ್ಲಿ ಸಂಭವಿಸಿದೆ.

ಮೃತರನ್ನು ಕ್ರೂಸರ್ ಚಾಲಕ, ಗಂಗಾವತಿ ಮೂಲದ ಶಂಕರ್ (35) ಮತ್ತು ಖಾಸಗಿ ಪಡಿತರ ವಿತರಣೆ ಕೇಂದ್ರವೊಂದರ ಮಾಲಕ ಸತೀಶ್ (40) ಎಂದು ಗುರುತಿಸಲಾಗಿದೆ.

ಪಡಿತರ ವಿತರಣೆ ಕೇಂದ್ರದ ಮಾಲಕರು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಲು ಇವರಿಬ್ಬರು ಕ್ರೂಸರ್ ನಲ್ಲಿ ತೆರಳುತ್ತಿದ್ದರು. ಕೋರ ಸಮೀಪ ಕ್ರೂಸರ್ ನ ಹಿಂಬದಿಯ ಟಯರ್ ಪಂಕ್ಚರ್ ಆಗಿದೆ. ಈ ಹಿನ್ನೆಲೆಯಲ್ಲಿ ರಸ್ತೆ ಬದಿಯಲ್ಲಿ ವಾಹನ ನಿಲ್ಲಿಸಿ ಟಯರ್ ಬದಲಿಸುತ್ತಿದ್ದ ವೇಳೆ ಹಿಂದಿನಿಂದ ಬಂದ ಟೆಂಪೊ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಕೋರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News