ಮಂಡ್ಯ ಮೂಲದ ಕಿರುತೆರೆ ನಟ ಹೃದಯಾಘಾತದಿಂದ ನಿಧನ

Update: 2023-08-18 08:21 GMT

ಪವನ್ 

ಮಂಡ್ಯ, ಆ.18: ಹಿಂದಿ ಮತ್ತು ತಮಿಳು ಕಿರುತೆರೆಯ ನಟ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಪವನ್ (25) ಮುಂಬೈನಲ್ಲಿ ಹೃದಯಘಾತದಿಂದ ಮೃತಪಟ್ಟಿರುವುದು ಶುಕ್ರವಾರ ಬೆಳಗ್ಗೆ ವರದಿಯಾಗಿದೆ. 

ಕೆ.ಆರ್. ಪೇಟೆ ತಾಲೂಕಿನ ಹರಿಹರಪುರ ಗ್ರಾಮದ ನಾಗರಾಜು ಮತ್ತು ಸರಸ್ವತಿಯ ಪುತ್ರ ಪವನ್ ಮುಂಬೈನಲ್ಲಿ ವಾಸವಿದ್ದರು ಎಂದು ತಿಳಿದು ಬಂದಿದೆ.

ಮುಂಬೈ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಗುರುವಾರ ಮುಂಜಾನೆ 5:00 ಗಂಟೆಗೆ ತೀವ್ರ ಹೃದಯಘಾತದಿಂದ ಕೊನೆ ಉಸಿರೆಳೆದಿದ್ದಾರೆ. ತನ್ನ ದೇಹ ಆಕರ್ಷಣೆಗಾಗಿ ಅತಿಯಾದ ವ್ಯಾಯಮಕ್ಕೆ (ಜಿಮ್)ತಲ್ಲಿನರಾಗಿದ್ದ ಕಾರಣವೇ ಈ ಘಟನೆಗೆ ಕಾರಣವಾಗಿದೆ ಎಂದು ಕುಟುಂಬಸ್ಥರ ಮೂಲಗಳು ತಿಳಿಸಿವೆ.

ಮೃತರ ಮೃತದೇಹವು ಮುಂಬೈನ ಆಸ್ಪತ್ರೆಯಲ್ಲಿದ್ದು, ಮರಣೋತ್ತರ ಪರೀಕ್ಷೆ ನಂತರ ಇಂದು (ಶುಕ್ರವಾರ)  ಹರಿಹರಪುರದಲ್ಲಿರುವ ಮೃತರ ತಮ್ಮ ಜಮೀನಿನಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಕುಟುಂಬಸ್ಥರ ಮೂಲಗಳು ತಿಳಿಸಿವೆ.

ಕಲಾವಿದ ಪವನ್ ಅಗಲಿಕೆಯಿಂದ ದುಃಖದ ಮಡುವಿನಲ್ಲಿರುವ ಮೃತರ ಕುಟುಂಬಕ್ಕೆ ಶಾಸಕ ಎಚ್.ಟಿ. ಮಂಜು,ಮಾಜಿ ಸಚಿವ ಕೆ.ಸಿ ನಾರಾಯಣಗೌಡ, ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ, ಬಿ.ಪ್ರಕಾಶ್, ಟಿ ಎ ಪಿ ಸಿ ಎಂ ಎಸ್ ಅಧ್ಯಕ್ಷ ಬಿ.ಎಲ್. ದೇವರಾಜು, ಮನ್ಮುಲ್ ನಿರ್ದೇಶಕ ಡಾಲು ರವಿ, ಕಾಂಗ್ರೆಸ್ ಮುಖಂಡ ಬೂಕನಕೆರೆ ವಿಜಯ ರಾಮೇಗೌಡ, ಸಮಾಜ ಸೇವಕ ಆರ್ ಟಿ ಓ ಮಲ್ಲಿಕಾರ್ಜುನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ ನಾಗೇಂದ್ರ ಕುಮಾರ್, ಎಂ ಡಿ ಸಿ ಸಿ ಬ್ಯಾಂಕ್ ಉಪಾಧ್ಯಕ್ಷ ಹೊಸಹೊಳಲು ಅಶೋಕ್, ಜೆಡಿಎಸ್ ಮುಖಂಡ ಅಕ್ಕಿಹೆಬ್ಬಾಳು ರಘು, ಟಿ ಎ ಪಿ ಸಿ ಎಂ ಎಸ್ ನಿರ್ದೇಶಕ ಬಲದೇವ್, ಯುವ ಜನತಾದಳ ರಾಜ್ಯ ಪ್ರಧಾನ ಕಾರ್ಯದರ್ಶಿ ಕುರುಬಹಳ್ಳಿ ನಾಗೇಶ್, ಇತರೆ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News