ಹನೂರು: ನೀರಿನಲ್ಲಿ‌ ಮುಳುಗಿ‌ ಇಬ್ಬರು ಯುವಕರು ಮೃತ್ಯು

Update: 2023-07-22 18:24 GMT

ಹನೂರು: ತಾಲೂಕಿನ ಹೊಗೆನಕಲ್ ಫಾಲ್ಸ್ ನಲ್ಲಿ ತಮಿಳುನಾಡಿನ ಇಬ್ಬರು ಯುವಕರು ನೀರಿನಲ್ಲಿ‌ ಮುಳುಗಿ‌ ಸಾವನ್ನಪ್ಪಿರುವ ಘಟನೆ ಶನಿವಾರ ಮಧ್ಯಾಹ್ನ ಜರುಗಿದೆ. ತಮಿಳುನಾಡು ರಾಜ್ಯದ ಕೃಷ್ಣಗಿರಿ ಜಿಲ್ಲೆಯ ಶಬರಿ (24)ಅಜಿತ್(26) ಮೃತಪಟ್ಟವರು.

ಎರಡು ದಿನಗಳ ಹಿಂದೆ ತಮಿಳುನಾಡಿನಿಂದ ಪಳನಿ, ಕೊಡೈಕ್ಯಾನ್ ಲ್ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿ, ಮಲೆ ಮಹದೇಶ್ವರ ಸ್ವಾಮಿಯ ಪೂಜೆಯನ್ನು ಸಲ್ಲಿಸಿ ತಮ್ಮ 15 ಜನ ಸ್ನೇಹಿತರ ಜೊತೆಗೂಡಿ ಹೊಗೆನಕಲ್ ಫಾಲ್ಸ್ ನಲ್ಲಿ ಈಜಲು ತೆರಳಿದ್ದಾರೆ ‌ಎನ್ನಲಾಗಿದೆ.

ಈ ವೇಳೆ ಅಜಿತ್ ಮತ್ತು ಶಬರಿ ಈಜಲು ಹೋದವರು ಮತ್ತೆ ವಾಪಸ್ ಬಂದಿರಲಿಲ್ಲ. ವಿಚಾರ ತಿಳಿದ ಸ್ನೇಹಿತರು ಹಾಗೂ ಸ್ಥಳೀಯರು ಮಲೆ ಮಹದೇಶ್ವರ ಬೆಟ್ಟ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರ ಸಮ್ಮುಖದಲ್ಲಿ ನುರಿತ ಈಜುಗಾರರ ಸಹಾಯದಿಂದ ಮೃತದೇಹ ಪತ್ತೆ ಮಾಡಲಾಗಿದೆ.

ಈ ಸಂಬಂಧ ಮಹದೇಶ್ವರಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News