ಲೋಕಸಭಾ ಚುನಾವಣೆ: ಬೆಂಗಳೂರು ದಕ್ಷಿಣದಿಂದ ಕಣಕ್ಕಿಳಿದ ವಾಟಾಳ್ ನಾಗರಾಜ್

Update: 2024-04-04 14:32 GMT

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಸ್ವತಂತ್ರ್ಯ ಅಭ್ಯರ್ಥಿಯಾಗಿ ಜಯನಗರದ ಬಿಬಿಎಂಪಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದರು.

ಯಾವುದೇ ಅದ್ದೂರಿ ಮೆರವಣಿಗೆ ಇಲ್ಲದೇ, ಸರಳವಾಗಿ ಆಟೋರಿಕ್ಷಾದಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾರ್ಯಾಲಯಕ್ಕೆ ಆಗಮಿಸಿ ನಾಮಪತ್ರ ಸಲ್ಲಿಸಿದರು.

ಬಳಿಕ ಮಾತನಾಡಿದ ಅವರು, "ಪ್ರಾಮಾಣಿಕವಾಗಿ ಕನ್ನಡಿಗರ ಬಗ್ಗೆ ಹೋರಾಟ ಮಾಡುವುದಕ್ಕೆ ಹಾಗೂ ಲೋಕಸಭೆಯಲ್ಲಿ ಸಮಗ್ರ ಕರ್ನಾಟಕದ ಅಭಿವೃದ್ಧಿಯ ಬಗ್ಗೆ ಮಾತನಾಡಬೇಕಾಗಿದೆ. ಕಾವೇರಿ, ಮಹದಾಯಿ, ಕಳಸಾ-ಬಂಡೂರಿ ಸೇರಿದಂತೆ ಇತರೆ ಹಲವಾರು ಕರ್ನಾಟಕದ ಜಲ, ನೆಲದ ಸಮಸ್ಯೆಗಳ ಕುರಿತು ಹೋರಾಟ ಮಾಡಲು ವಾಟಾಳ್ ನಾಗರಾಜ್ ಒಬ್ಬರಿಗೆ ಮಾತ್ರ ಸಾಧ್ಯ. ಈವರೆಗೂ ಲೋಕಸಭೆಗೆ ಆಯ್ಕೆಯಾದ ವ್ಯಕ್ತಿಗಳು ಪ್ರಾಮಾಣಿಕವಾಗಿ ತಮ್ಮ ಕರ್ತವ್ಯ ಪಾಲನೆ ಮಾಡಲಿಲ್ಲ" ಎಂದು ದೂರಿದರು.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News