ವಿಜಯಪುರ | ಬ್ಯಾಡ್ಮಿಂಟನ್ ಆಡುತ್ತಿದ್ದ ವೇಳೆ ಹೃದಯಾಘಾತ: ಲೋಕಾಯುಕ್ತ ಡಿವೈಎಸ್ಪಿ ಮೃತ್ಯು

Update: 2023-07-20 05:36 GMT

ವಿಜಯಪುರ, ಜು.20: ಬ್ಯಾಡ್ಮಿಂಟನ್ ಆಡುತ್ತಿದ್ದ ವೇಳೆ ಕುಸಿದುಬಿದ್ದು ಲೋಕಾಯುಕ್ತ ಡಿವೈಎಸ್ಪಿ ಮೃತಪಟ್ಟ ಘಟನೆ ವಿಜಯಪುರ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಬುಧವಾರ ನಡೆದಿದೆ.

ವಿಜಯಪುರ ಜಿಲ್ಲಾ ಲೋಕಾಯುಕ್ತದಲ್ಲಿ ಡಿವೈಎಸ್ಪಿಯಾಗಿ ಸೇವೆ ಸಲ್ಲಿಸುತ್ತಿದ್ದ ಅರುಣ್ ನಾಯಕ್ ಮೃತಪಟ್ಟವರು. ಅರುಣ್ ನಾಯಕ್ ನಿನ್ನೆ ಸಂಜೆ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್ ಆಡುತ್ತಿದ್ದರು. ಈ ವೇಳೆ ಹೃದಯಾಘಾತಕ್ಕಾಗಿ ಅವರು ಏಕಾಏಕಿ ಕುಸಿದುಬಿದ್ದರೆನ್ನಲಾಗಿದೆ. ಅವರನ್ನು ತಕ್ಷಣ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ಮೃತರು ಪತ್ನಿ, ಓರ್ವ ಪುತ್ರ ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News