ವಿಕ್ರಂ ಸಿಂಹ ಬಂಧನಕ್ಕೂ, ಸಿಎಂಗೂ ಸಂಬಂಧವಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್

Update: 2023-12-31 14:55 GMT

ಬೆಂಗಳೂರು: ಸಂಸದ ಪ್ರತಾಪ್ ಸಿಂಹ ಸೋದರ ವಿಕ್ರಂ ಸಿಂಹ ಬಂಧನಕ್ಕೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಯಾವುದೇ ಸಂಬಂಧವಿಲ್ಲ. ಆದರೆ, ಬಿಜೆಪಿ ನಾಯಕರು  ಅನವಶ್ಯಕವಾಗಿ ಪ್ರಕರಣಕ್ಕೆ ರಾಜಕೀಯ ಬಣ್ಣ ಕೊಡುತ್ತಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ದೂರಿದ್ದಾರೆ.

ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಕ್ರಂ ಸಿಂಹ ಅಕ್ರಮವಾಗಿ ಮರ ಕಡಿದಿರುವುದು ನಿಜ ಅಲ್ವಾ?. ಅನುಮತಿ ಇಲ್ಲದೆ ಮರ ಕಡಿದಿದ್ದಾರೆ. ಆದ್ದರಿಂದ ಕ್ರಮ ಆಗಿದೆ. ಇದರಲ್ಲೂ ರಾಜಕೀಯ ಮಾಡುವುದು ಸರಿಯಲ್ಲ ಎಂದು ತಿಳಿಸಿದರು.

ಇನ್ನೂ, ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ಆಗಬಾರದು. ವಾರದ ಹಿಂದೆಯೇ ಪೊಲೀಸ್ ಅಧಿಕಾರಿಗಳ ಜೊತೆ ಚರ್ಚೆ ಆಗಿದೆ. ಪ್ರತಿ ವರ್ಷ ಬೆಂಗಳೂರು ನಗರದಲ್ಲಿ ಸಾವಿರಾರು ಜನ ಸೇರುತ್ತಾರೆ. ಬೆಂಗಳೂರಿನ ಎಂ.ಜಿ.ರೋಡ್, ಬ್ರಿಗೇಡ್ ರೋಡ್‍ನಲ್ಲಿ ಹೆಚ್ಚಿನ ಜನ ಸೇರುತ್ತಿದ್ದು, ಹೀಗಾಗಿ ವಿಶೇಷ ಗಮನ ಕೊಡಬೇಕೆಂದು ಸೂಚಿಸಲಾಗಿದೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News