ವಿರಾಜಪೇಟೆ: ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಢಿಕ್ಕಿ; ಯುವತಿ ಸಾವು, ಓರ್ವ ಗಂಭೀರ

Update: 2023-08-19 08:44 GMT

ವಿರಾಜಪೇಟೆ: ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ, ಬ್ಯಾಂಕ್ ಉದ್ಯೋಗಿ ಯುವತಿಯೊಬ್ಬಳು ಮೃತಪಟ್ಟ ಘಟನೆ ಅಮ್ಮತ್ತಿ ರಸ್ತೆಯ ಸುಂಕದ ಕಟ್ಟೆಯ ಬಳಿ ನಡೆದಿರುವ ಬಗ್ಗೆ ವರದಿಯಾಗಿದೆ.

ಮೃತ ಯುವತಿಯನ್ನು ಮೂಲತಃ ಕೇರಳದ ತ್ರಿಶೂರ್ ಜಿಲ್ಲೆಯ ಅಮೃತ (24) ಎಂದು ಗುರುತಿಸಲಾಗಿದೆ. ಅಮ್ಮತ್ತಿ ಕೆನರಾ ಬ್ಯಾಂಕ್ ಉದ್ಯೋಗಿಯಾಗಿದ್ದ ಈಕೆ ವಿರಾಜಪೇಟೆ ನಗರದ ಖಾಸಗಿ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದಳು.

ಅಪಘಾತದಲ್ಲಿ ಸವಾರರಿಬ್ಬರಿಗೂ ತಲೆ ಭಾಗಕ್ಕೆ ಗಂಭೀರವಾಗಿ ಗಾಯಗಳಾಗಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಕಾರಣ ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಅಮೃತಾಳನ್ನು ಮೈಸೂರಿನ ಅಪೋಲೋ ಆಸ್ಪತ್ರೆಗೆ ರವಾನಿಸಲಾಗಿತ್ತು. ಇನ್ನೊಬ್ಬ ಬೈಕ್ ಸವಾರ ಬಿಳುಗುಂದ ಗ್ರಾಮದ ವಿಠ್ಠಲ (22) ಎಂಬಾತನನ್ನು ಮಂಗಳೂರಿನ ಆಸ್ಪತ್ರೆಗೆ ಕಳುಹಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಮೃತ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.

ವಿರಾಜಪೇಟೆ ನಗರ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News