ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರೆ ತಪ್ಪೇನು?: ಬಿಜೆಪಿ ಶಾಸಕ ಯತ್ನಾಳ್‌

Update: 2023-08-29 08:04 GMT

ವಿಜಯಪುರ: ಇತ್ತೀಚೆಗೆ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿ ಮಾಡಿರುವ ʼಆಪರೇಷನ್‌ ಹಸ್ತʼದ ಬಗ್ಗೆ  ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್‌ ಪ್ರತಿಕ್ರಿಯಿಸಿದ್ದಾರೆ. 

ಜಿಲ್ಲೆ ದೇವರಹಿಪ್ಪರಗಿ ಪಟ್ಟಣದಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಅವರು, ʼʼಸಿದ್ದರಾಮಯ್ಯ ಏನಾದರೂ ಪಾಕಿಸ್ತಾನದ ಮುಖ್ಯಮಂತ್ರಿನಾ?, ಮುಖ್ಯಮಂತ್ರಿ ಅಂದರೆ ಶಾಸಕರು, ಜನ ಪ್ರತಿನಿಧಿಗಳು ಅವರ ಬಳಿ ಹೋಗುವುದು ಸಹಜ. ಸಿಎಂ ಸಿದ್ದರಾಮಯ್ಯ ಹಾಗೂ ನಮ್ಮ ನಡುವೆ ಆತ್ಮೀಯತೆ ಇದೆʼʼ ಎಂದು ಹೇಳಿದರು.  

ʼʼನಾನು ಆಸ್ಪತ್ರೆಯಲ್ಲಿದ್ದಾಗ ಸಿದ್ದರಾಮಯ್ಯ ನನ್ನನ್ನು ನೋಡಲು ಬಂದಿದ್ದರು. ಯಾರು ಏನೇ ಅಂದರೂ ತಲೆಕೆಡಿಸಿಕೊಳ್ಳುದೇ ರಾಜ್ಯದ ಜನರಿಗೆ ಉತ್ತಮ ಆಡಳಿತ ನೀಡುತ್ತೇನೆ ಅಂತ ಹೇಳಿದ್ದರುʼʼ ಎಂದು ಯತ್ನಾಳ್ ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News