ಅಪರಾಧ ಹಿನ್ನೆಲೆಯಿರುವ ಅದಾನಿಯನ್ನು ಪ್ರಧಾನಿ ಮೋದಿ ರಕ್ಷಿಸುವುದ್ಯಾಕೆ‌? : ದಿನೇಶ್‌ ಗುಂಡೂರಾವ್‌

Update: 2024-11-22 12:39 IST
Photo of  Dinesh Gundurao

ದಿನೇಶ್‌ ಗುಂಡೂರಾವ್‌

  • whatsapp icon

ಬೆಂಗಳೂರು : "ಲಂಚದ ಹಣವನ್ನು ವಿದೇಶಿ ಹೂಡಿಕೆದಾರರಿಂದ ಪಡೆದ ಆರೋಪದ ಮೇಲೆ ಅದಾನಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ. ಈ ಪ್ರಕರಣದ ಬಳಿಕ ಅದಾನಿ ಒಬ್ಬ ವೃತ್ತಿಪರ ಅಪರಾಧಿ ಎಂದು ಮತ್ತೊಮ್ಮೆ ಸಾಬೀತಾಗಿದೆ. ಇಂತಹ ಅಪರಾಧ ಹಿನ್ನೆಲೆಯಿರುವ ಅದಾನಿಯವರನ್ನು ಮೋದಿಯವರು ರಕ್ಷಿಸುವುದ್ಯಾಕೆ‌?" ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರಶ್ನಿಸಿದ್ದಾರೆ.

ಶುಕ್ರವಾರ ಈ ಸಂಬಂಧ ಸಾಮಾಜಿಕ ಜಾಲತಾಣ X ನಲ್ಲಿ ಬರೆದುಕೊಂಡಿರುವ ಅವರು, "ಪ್ರಧಾನಿ ನರೇದ್ರ ಮೋದಿಯವರ ಅತ್ಯಾಪ್ತ ಗೆಳೆಯ ಅದಾನಿ ಬಂಧನಕ್ಕೆ ಅಮೆರಿಕ ಕೋರ್ಟ್ ವಾರೆಂಟ್ ಹೊರಡಿಸಿದೆ. ಗೌತಮ್‌ ಅದಾನಿ ಭಾರತದಲ್ಲಿ ತಮ್ಮ ಉದ್ಯಮ ವಿಸ್ತರಿಸಲು ಅಧಿಕಾರಿಗಳಿಗೆ 2100 ಕೋಟಿ ರೂ.ಗೂ ಅಧಿಕ ಲಂಚದ ಅಮಿಷ ಒಡ್ಡಿದ್ದಾರೆ. ಆ ಲಂಚದ ಹಣವನ್ನು ವಿದೇಶಿ ಹೂಡಿಕೆದಾರರಿಂದ ಪಡೆದ ಆರೋಪದ ಮೇಲೆ ಅದಾನಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ" ಎಂದು ತಿಳಿಸಿದ್ದಾರೆ.

"ಪ್ರತಿ ಭಾರಿ ಸಂಪತ್ತಿನ ಹಿಂದೆ ಒಂದೋ ಅಕ್ರಮವಿರುತ್ತದೆ, ಇಲ್ಲವೆ ಅಪರಾಧವಿರುತ್ತದೆ ಎಂಬುದು ಲೋಕರೂಢಿ ಮಾತು. ಮೋದಿಯವರ ಅತ್ಯಾಪ್ತ ಗೆಳೆಯ  ಅದಾನಿ ಗಳಿಸಿರುವ ಸಂಪತ್ತಿನ ಹಿಂದೆ ಇಂತಹ ಹಲವು ಅಕ್ರಮಗಳು ಹಾಗೂ ಅಪರಾಧಗಳ ಸರಮಾಲೆಯೇ ಇದೆ" ಎಂದು ಹೇಳಿದ್ದಾರೆ.

"ಅದಾನಿಯವರು ತಮ್ಮ ಉದ್ಯಮ ವ್ಯವಹಾರ ವಿಸ್ತರಿಸಲು ಇಡೀ ವ್ಯವಸ್ಥೆಯನ್ನೇ ಭ್ರಷ್ಟ ಮಾಡುವ ಕಲೆ ಸಿದ್ದಿಸಿಕೊಂಡಿದ್ದಾರೆ. ಇಂತಹ ಭ್ರಷ್ಟ ಉದ್ಯಮಿಯನ್ನು ತಮ್ಮ ಆಪ್ತ ವಲಯದಲ್ಲಿ ಬಿಟ್ಟುಕೊಂಡಿರುವ ಮೋದಿಯವರ ಪ್ರಾಮಾಣಿಕತೆಯ ಬಗ್ಗೆಯೂ ಅನುಮಾನ ಮೂಡುವುದಿಲ್ಲವೇ?" ಎಂದು ಪ್ರಶ್ನಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News