ಯುವಕನ ಕಿರುಕುಳಕ್ಕೆ ಮನನೊಂದು ಯುವತಿ ಆತ್ಮಹತ್ಯೆ; ಪ್ರಕರಣ ದಾಖಲು

Update: 2023-07-03 16:26 GMT

ಮೈಸೂರು,ಜು.3: ಯುವಕನ ಕಿರುಕುಳಕ್ಕೆ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ತಾಲೂಕಿನ ಗಣಗರಹುಂಡಿ ಗ್ರಾಮದಲ್ಲಿ ವರದಿಯಾಗಿದೆ.

ಹರ್ಷಿತಾ (21) ಆತ್ಮಹತ್ಯೆ ಮಾಡಿಕೊಂಡ ಯುವತಿ ಎಂದು ತಿಳಿದು ಬಂದಿದೆ.

ಅದೇ ಗ್ರಾಮದಲ್ಲಿ (ಗಣಗರಹುಂಡಿ) ವಾಸವಿದ್ಧ ಶಿವು ಎನ್ನುವ ಯುವಕ ತನ್ನನ್ನು ಪ್ರೀತಿಸುವಂತೆ ಹರ್ಷಿತಾಳನ್ನು ಒತ್ತಾಯಿಸುತ್ತಿದ್ದ ಎಂದು ಹೇಳಲಾಗಿದೆ. ಇದರಿಂದ ಮನನೊಂದ ಹರ್ಷಿತಾ ಕೀಟನಾಶಕ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಕೂಡಲೇ ಕಟುಂಬಸ್ಥರು ಹರ್ಷಿತಾಳನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಜೀವಬಿಟ್ಟಿದ್ದಾಳೆ.

ಮಗಳ ಸಾವಿಗೆ ಶಿವು ಕಾರಣ ಎಂದು ಹರ್ಷಿತಾ ತಂದೆ ವೇಣುಗೋಪಾಲ್ ಆರೋಪ ಮಾಡಿದ್ದು, ಈ ಬಗ್ಗೆ ಇಲವಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News