ಬಂಟ್ವಾಳ: ಪೋಲೀಸ್ ಠಾಣೆಗೆ ಹಾಜರಾದ ನಾಪತ್ತೆಯಾಗಿದ್ದ ಯುವತಿ; ಪ್ರಕರಣ ಸುಖಾಂತ್ಯ

Update: 2023-06-15 09:43 GMT

ಬಂಟ್ವಾಳ: ಬಂಟ್ವಾಳದಿಂದ ನಾಪತ್ತೆಯಾಗಿದ್ದ ಯುವತಿ ಬುಧವಾರ ಬಂಟ್ವಾಳ ನಗರ ಪೋಲೀಸ್ ಠಾಣೆಗೆ ಖುದ್ದು ಹಾಜರಾಗುವ ಮೂಲಕ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದೆ.

ಇಲ್ಲಿನ ಬಿ. ಕಸಬಾ ಗ್ರಾಮದ ಲೆಕ್ಕಸಿರಿ ಪಾದೆ ನಿವಾಸಿ ದಿ.ರಮೇಶ್ ಸಾಲಿಯಾನ್ ಅವರ ಪುತ್ರಿ ನೇಹಾ ಅವರು ನಾಪತ್ತೆಯಾಗಿರುವ ಬಗ್ಗೆ ಈಕೆಯ ಸಹೋದರ ಬಂಟ್ವಾಳ ‌ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದರು.

ಈಕೆಗೆ ಮದುವೆ ಮಾಡಿಸುವ ಬಗ್ಗೆ ಮಾತುಕತೆ ನಡೆಸಲಾಗಿದ್ದು, ಈ ವೇಳೆ ನೇಹಾ ನಾನು ಸದ್ಯ ಮದುವೆ ಆಗುವುದಿಲ್ಲ ಎಂದು ವಿದ್ಯಾಭ್ಯಾಸ ಮುಂದುವರಿಸುವ ಇಂಗಿತ ವ್ಯಕ್ತಪಡಿಸಿದ್ದಳು‌. ಬಳಿಕ ಆಕೆ ಬೆಂಗಳೂರಿಗೆ ಹೋಗುವುದಾಗಿ ಮನೆಯವರಿಗೆ ಮೊಬೈಲ್ ಗೆ ಮೆಸೇಜ್ ಮಾಡಿ ನಾಪತ್ತೆಯಾಗಿದ್ದಾಳೆ ಎಂದು ದೂರಿನಲ್ಲಿ ತಿಳಿಸಲಾಗಿತ್ತು.

ನೇಹಾ ಬುಧವಾರ ನೇರವಾಗಿ ಬಂಟ್ವಾಳ ನಗರ ಪೋಲೀಸ್ ಠಾಣೆ ಗೆ ಹಾಜರಾಗಿ ನಾನು ಸ್ವಇಚ್ಛೆಯಿಂದ ಮನೆ ಬಿಟ್ಟು ಬೆಂಗಳೂರಿಗೆ ಹೋಗಿದ್ದು, ನನಗೆ ನನ್ನ ಮನೆಯವರೊಂದಿಗೆ ಹೋಗಲು ಇಚ್ಚೆ ಇಲ್ಲ. ನಾನು ಮುಂದಕ್ಕೆ ವೃತ್ತಿಯೊಂದಿಗೆ ವಿದ್ಯಾಭ್ಯಾಸ ಮುಂದುವರೆಸಲು ಹಾಗೂ ಬದುಕಲು ನಿಶ್ವಯಿಸಿದ್ದು, ನಾನು ಪಿ.ಜಿ ಯಲ್ಲಿ ವಾಸ್ತವ್ಯ ಇದ್ದು ನನ್ನ ವಿದ್ಯಾಭ್ಯಾಸ ಮುಂದುವರಿಸಲು ಇಚ್ಚಿಸಿರುತ್ತೇನೆ ಎಂದು ಹೇಳಿಕೆ ನೀಡಿದ್ದಾಳೆ.

ಬಂಟ್ವಾಳ ನಗರ ಠಾಣಾ ಪೋಲೀಸರು ಈಕೆ ನೀಡಿದ ಹೇಳಿಕೆಯನ್ನು ಮನೆಯವರಿಗೆ ತಿಳಿಸಿದ್ದು ಆಕೆಯನ್ನು ಕಳುಹಿಸಿ ಕೊಟ್ಟಿರುವುದಾಗಿ ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News