ಪಡಿತರ ಚೀಟಿ ತಿದ್ದುಪಡಿ ಅವಧಿ ವಿಸ್ತರಣೆ: ದ.ಕ. ಜಿಲ್ಲೆಯಲ್ಲಿ ಅ.19ರಿಂದ ಅ.21ರವರೆಗೆ ಅವಕಾಶ

Update: 2023-10-17 06:06 GMT

ಸಾಂದರ್ಭಿಕ ಚಿತ್ರ

ಮಂಗಳೂರು, ಅ. 17: ರಾಜ್ಯದಲ್ಲಿ ಪಡಿತರ ಚೀಟಿ ತಿದ್ದುಪಡಿಗೆ ನೀಡಿದ್ದ ಗಡುವನ್ನು ವಿಸ್ತರಿಸಲಾಗಿದ್ದು, ದ.ಕ. ಜಿಲ್ಲೆಯಲ್ಲಿ ಈ ಅವಧಿ ಅ. 19ರಿಂದ ಅ.21 ಆಗಿದೆ ಎಂದು ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸರ್ವರ್ ಸಮಸ್ಯೆ ಉಂಟಾಗಿದ್ದ ಕೆಲವು ಜಿಲ್ಲೆಗಳಲ್ಲಿ ಈ ತಿದ್ದುಪಡಿ ವಿಸ್ತರಣೆಗೆ ಅವಕಾಶ ನೀಡಲಾಗಿದೆ. ತಿದ್ದುಪಡಿ ವೇಳೆ ಮೃತರ ಹೆಸರನ್ನು ತೆಗೆದು ಹಾಕುವುದು ಹಾಗೂ ವಿವಾಹವಾಗಿ ಬಂದವರ ಹೆಸರನ್ನು ಪಡಿತರ ಚೀಟಿಗೆ ಸೇರ್ಪಡೆಗೊಳಿಸಲು ಅವಕಾಶವಿರುತ್ತದೆ. ಸೂಕ್ತ ದಾಖಲೆಗಳೊಂದಿಗೆ ವಿಳಾಸ ಸೇರಿದಂತೆ ಈ ತಿದ್ದುಪಡಿಗಳನ್ನು ಮಾಡಬಹುದು. ಆದರೆ ಹೊಸ ಪಡಿತರ ಚೀಟಿಗೆ ಸದ್ಯ ರಾಜ್ಯದಿಂದ ಅವಕಾಶ ದೊರಕಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News