ಕೇರಳ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

Update: 2023-09-12 10:26 GMT

ಸಾಂದರ್ಭಿಕ ಚಿತ್ರ (PTI) 

ಕೊಚ್ಚಿ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಎರ್ನಾಕುಲಂನ ಕದಮಕ್ಕುಡಿಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಪತಿ ಮಿಜೊ ಜಾನಿ ಹಾಗೂ ಪತ್ನಿ ಶಿಲ್ಪಾ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರ ಇಬ್ಬರು ಮಕ್ಕಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿದೇಶದಲ್ಲಿ ವಾಸಿಸುತ್ತಿದ್ದ ಶಿಲ್ಪಾ, ಇತ್ತೀಚೆಗಷ್ಟೆ ಕೇರಳಕ್ಕೆ ಮರಳಿದ್ದರು ಎಂದು mathrubhumi.com ವರದಿ ಮಾಡಿದೆ.

ಮಿಜೊ ಸಣ್ಣಪುಟ್ಟ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದ ಎಂದು ಹೇಳಲಾಗಿದೆ. ಪ್ರಾಥಮಿಕ ತನಿಖೆಗಳ ಪ್ರಕಾರ, ಆರ್ಥಿಕ ಮುಗ್ಗಟ್ಟಿನಿಂದ ಅವರೆಲ್ಲ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News