ಚಾಮರಾಜನಗರ: ಬಾಲಕಿ ಮೇಲೆ ಚಿರತೆ ದಾಳಿ

Update: 2023-06-27 04:16 GMT

ಚಾಮರಾಜನಗರ: ಪುಟ್ಟ ಬಾಲಕಿಯೊಬ್ಬಳ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ಹನೂರು ತಾಲೂಕಿನ ಅರಣ್ಯ ಪ್ರದೇಶದ ಸಮೀಪದಲ್ಲಿರುವ ಚಿಕ್ಕಮಾಲಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಕಗ್ಗಲಿ ಗುoದಿ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ.

5 ವರ್ಷದ ಸುಶೀಲ ಎಂಬಾಕೆ ದಾಳಿಗೊಳಗಾದ ಬಾಲಕಿ. ರಾತ್ರಿ ವೇಳೆಯಲ್ಲಿ ಮನೆಯ ಮುಂದೆ ಕುಳಿತ್ತಿದ್ದ ವೇಳೆ ಹಠಾತ್ತಾಗಿ ದಾಳಿ ನಡೆಸಿದ ಚಿರತೆ ಬಾಲಕಿಯನ್ನು ಎಳೆದೊಯ್ಯುತ್ತಿರುವಾಗ ಸಮೀಪದಲ್ಲಿದ್ದ ಬಾಲಕಿಯ ತಂದೆಯ ಕಿರುಚಾಟದಿಂದ ಬಾಲಕಿಯನ್ನು ಬಿಟ್ಟು ಓಡಿದೆ ಎಂದು ತಿಳಿದು ಬಂದಿದೆ.

ಬಾಲಕಿಗೆ ಗಂಭೀರ ಗಾಯಗಳಾಗಿದ್ದು ಸಮೀಪದಲ್ಲಿರುವ ಕಾಮಗೆರೆ ಹೋಲಿ ಕ್ರಾಸ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಿದ ಬಳಿಕ  ಹೆಚ್ಚಿನ ಚಿಕಿತ್ಸೆಗಾಗಿ  ಮೈಸೂರು ಆಸ್ಪತ್ರೆಗೆ ರವಾನಿಸಲಾಗಿದೆ.

ಇತ್ತೀಚಿಗೆ ಕಾಡಂಚಿನ ಗ್ರಾಮಗಳಲ್ಲಿ ಮನುಸ್ಯರ ಮೇಲೆ ಚಿರತೆ ಮತ್ತು ಆನೆ ದಾಳಿಗಳು ಹೆಚ್ಚಾಗಿ ನಡೆಯುತ್ತಿದ್ದು ಅರಣ್ಯ ಸಮೀಪದಲ್ಲಿ ಇರುವ ಗ್ರಾಮಗಳಿಗೆ ಅರಣ್ಯ ಇಲಾಖೆ ಇಂತಹ ದಾಳಿಗಳನ್ನು ತಡೆಯುವ ನಿಟ್ಟಿನಲ್ಲಿ ಸೂಕ್ತ ವ್ಯವಸ್ಥೆ ಮಾಡುವ ಕೆಲಸ ಮಾಡಬೇಕಿದೆ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News