ಕಾಸರಗೋಡು: ಮಣಿಪುರ ಘಟನೆ ವಿರುದ್ಧ ಪ್ರತಿಭಟನೆ ವೇಳೆ ಪ್ರಚೋದನಾಕಾರಿ ಘೋಷಣೆ ಆರೋಪ; ನಾಲ್ವರ ಬಂಧನ

Update: 2023-07-27 10:43 GMT

ಕಾಸರಗೋಡು: ಮಣಿಪುರ ಘಟನೆ ಖಂಡಿಸಿ ಮುಸ್ಲಿಂ ಯೂತ್ ಲೀಗ್ ಕಾಞ೦ಗಾಡ್ ನಲ್ಲಿ ನಡೆಸಿದ ಪ್ರತಿಭಟನಾ ಮೆರವಣಿಗೆ ಸಂದರ್ಭದಲ್ಲಿ ಪ್ರಚೋದನಾಕಾರಿ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐವರನ್ನು ಹೊಸದುರ್ಗ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ.

ಬಂಧಿತರನ್ನು ಅಬ್ದುಲ್ ಸಲಾಂ ( 18) , ಷರೀಫ್ ( 38) ಪಿ . ಎಚ್ ಅಯೂಬ್ ( 45) ಮತ್ತು ಪಿ . ಮುಹಮ್ಮದ್ ಕುಂಞ ( 55) ಎಂದು ಗುರುತಿಸಲಾಗಿದೆ. ಎರಡು ದಿನಗಳ ಹಿಂದೆ ಕಾಞ೦ಗಾಡ್ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ಆಯೋಜಿಸಲಾಗಿತ್ತು . ಈ ಸಂದರ್ಭದಲ್ಲಿ ಘೋಷಣೆಗಳನ್ನು ಕೂಗಿದ ಬಗ್ಗೆ ಪೊಲೀಸರಿಗೆ ಲಭಿಸಿದ ದೂರಿನಂತೆ ಕ್ರಮ ತೆಗೆದುಕೊಳ್ಳಲಾಗಿದೆ. ಇವರ ವಿರುದ್ಧ ಜಾಮೀನು ರಹಿತ ಮೊಕದ್ದಮೆ ಹೂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣ ಗಳ ಮೂಲಕವೂ ಪ್ರಚೋದನೆ ನೀಡುವ ಸಂದೇಶ ರವಾನಿಸುವವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News