ಯುವಕರ ತಂಡದಿಂದ ವ್ಯಕ್ತಿಗೆ ಹಲ್ಲೆ; ಪ್ರಕರಣ ದಾಖಲು

Update: 2023-06-23 08:57 GMT

ಚಾಮರಾಜನಗರ: ವ್ಯಕ್ತಿಯೊಬ್ಬರಿಗೆ ಯುವಕರ ತಂಡ ಹಲ್ಲೆ ಮಾಡಿರುವ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ ಹಂಗಳ ಗ್ರಾಮದ ಬಸ್ ನಿಲ್ದಾಣದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಯುವಕರ ಗುಂಪೊಂದು ಬಸ್ ನಿಲ್ದಾಣಕ್ಕೆ ಬಂದು ಹುಡುಗಿ ಪಕ್ಕ ಕುಳಿತಿದ್ದೀಯ ಎಂದು ಗಲಾಟೆ ಮಾಡಿ ಮಂಗಲ ಗ್ರಾಮದ ನಾಗೇಶ್ ಎಂಬವರ ಮೇಲೆ ಹಲ್ಲೆ ನಡೆಸಿದೆ ಎನ್ನಲಾಗಿದೆ.

ಆರೋಪಿಗಳನ್ನು ಹಂಗಳ ಗ್ರಾಮದ ಸಿದ್ದರಾಜು, ನಂದೀಶ, ಗೋಪಾಲ, ತೇಜು ಎಂದು ಗುರುತಿಸಲಾಗಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಈ ಸಂಬಂಧ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗಾಯಾಳು ನಾಗೇಶ್ ಅವರನ್ನು ಗುಂಡ್ಲುಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News