ಶಿವಮೊಗ್ಗ: ಒಂಟಿ ಮಹಿಳೆ ಕೊಲೆ ಪ್ರಕರಣದ ಪ್ರಮುಖ ಆರೋಪಿಯ ತಾಯಿ ಮನನೊಂದು ಆತ್ಮಹತ್ಯೆಗೆ ಯತ್ನ

Update: 2023-06-22 08:10 GMT

ಶಿವಮೊಗ್ಗ: ಶಿವಮೊಗ್ಗದ ಒಂಟಿ ಮಹಿಳೆ ಕೊಲೆ ಪ್ರಕರಣದ ಪ್ರಮುಖ ಆರೋಪಿಯ ತಾಯಿ ಮನನೊಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ತಾಲೂಕಿನ ಅಬ್ಬಲಗೆರೆ ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಶಿವಮೊಗ್ಗ ತಾಲೂಕಿನ ಹುಣಸೋಡು ಗ್ರಾಮದ ಸೀತಾ ಬಾಯಿ (50) ಆತ್ಮಹತ್ಯೆಗೆ ಮುಂದಾದವರು.ಇದೇ ಜೂನ್ 17ರಂದು ಶಿವಮೊಗ್ಗದ ವಿಜಯನಗರದಲ್ಲಿ ಕಮಲಮ್ಮ ಎಂಬುವರನ್ನು ಕೊಲೆ ಮಾಡಲಾಗಿತ್ತು. ಈ ಪ್ರಕರಣದ ಪ್ರಮುಖ ಆರೋಪಿ ಕಾರು ಚಾಲಕ ಹನುಮಂತ ನಾಯ್ಕ ನಾಪತ್ತೆಯಾಗಿದ್ದ.ಕಮಲಮ್ಮ ನವರನ್ನು ಕೊಲೆಗೈದು ಸುಮಾರು 35 ಲಕ್ಷ ಹಣವನ್ನು ದೋಚಲಾಗಿತ್ತು ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಕೊಲೆಗಾರನ ಸುಳಿವು ಪಡೆದ ಶಿವಮೊಗ್ಗದ ತುಂಗಾನಗರ ಪೊಲೀಸರು ಆರೋಪಿ ಹನುಮಂತ ನಾಯ್ಕ ನ ಬೆನ್ನು ಬಿದ್ದಿದ್ದರು. ಕೊಲೆ ಪ್ರಕರಣದ ಹಿನ್ನಲೆಯಲ್ಲಿ‌ ಮಗ ಹನುಮಂತ ನಾಯ್ಕ , ಪತಿ ‌ರೂಪಾ ನಾಯ್ಕ ಇಬ್ಬರು ಮನೆ ಬಿಟ್ಟು ಪರಾರಿಯಾಗಿದ್ದರು. ಇದರಿಂದ ಮನನೊಂದ ಸೀತಾಬಾಯಿ ಸಂಬಂಧಿಕರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ.

ಗುರುವಾರ ಬೆಳಗ್ಗೆ 10ಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಸೀತಾಬಾಯಿಯನ್ನು ರಕ್ಷಿಸಿ ಆಸ್ಪತ್ರೆಗೆ ಸಂಬಂಧಿಕರು ದಾಖಲು ಮಾಡಿದ್ದಾರೆ.

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಸೀತಾ ಬಾಯಿ ಚಿಕಿತ್ಸೆ ಪಡೆಯುತ್ತಿದ್ದು ಸದ್ಯ ಪ್ರಾಣಾಪಾಯದಿಂದ ಸೀತಾಬಾಯಿ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News