ತುಮಕೂರು: ಮೋದಿ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಬಿಜೆಪಿ ಕಾರ್ಯಕರ್ತನಿಗೆ ಹಿರಿಯ ಮುಖಂಡನಿಂದ ಕಪಾಳ ಮೋಕ್ಷ

Update: 2024-09-17 08:43 GMT

ಘಟನೆಯ ಬಳಿಕ ಸ್ಥಳದಿಂದ ನಿರ್ಗಮಿಸುತ್ತಿರುವ ಮಾಜಿ ಸಚಿವ ಸೊಗಡು ಶಿವಣ್ಣ

ತುಮಕೂರು: ಪ್ರಧಾನಿ ಮೋದಿ ಅವರ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಕೇಂದ್ರ ಜಲಶಕ್ತಿ ಹಾಗೂ ರೈಲ್ವೇ ರಾಜ್ಯ ಖಾತೆ ಸಚಿವ ವಿ.ಸೋಮಣ್ಣರ ಮುಂದೆಯೇ ಬಿಜೆಪಿಯ ಹಿರಿಯ ಮುಖಂಡನೋರ್ವ ಕಾರ್ಯಕರ್ತನಿಗೆ ಕಪಾಳ ಮೋಕ್ಷ ಮಾಡಿರುವ ಘಟನೆ ಜಿಲ್ಲಾ ಬಿಜೆಪಿ ಘಟಕದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ತುಮಕೂರಿನ ಪ್ರವಾಸಿ ಮಂದಿರದ ಕೇಂದ್ರ ಸಚಿವ ಕಚೇರಿ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ ಅವರು ಕಾರ್ಯಕರ್ತನೊಬ್ಬ ತನ್ನನ್ನು ತಳ್ಳಿದ್ದಾನೆ ಎಂದು ಕೋಪದಲ್ಲಿ ಆತನ ಕೆನ್ನೆಗೆ ಹೊಡೆದಿದ್ದಾರೆ. ಕೊನೆಗೆ ಕೇಂದ್ರ ಸಚಿವ ಸೋಮಣ್ಣ ಅವರು ಇಬ್ಬರನ್ನು ಬಿಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಸಂದರ್ಭ  ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ ಹಬ್ಬಾಕ ಹಾಗೂ ಬಿಜೆಪಿ ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸ್ಥಳದಲ್ಲಿದ್ದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News