ಮಧುಗಿರಿ: ಬಹಿರ್ದೆಸೆಗೆ ತೆರಳಿದ್ದ ಇಬ್ಬರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Update: 2024-08-30 08:52 GMT

ಸಾಂದರ್ಭಿಕ ಚಿತ್ರ (PTI)

ತುಮಕೂರು: ಚಿರತೆ ದಾಳಿಯಿಂದ ಇಬ್ಬರು ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿ ವೀರಣ್ಣನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ರಾಮಕೃಷ್ಣಪ್ಪ ಮತ್ತು ಶಿವಣ್ಣ ರಾತ್ರಿ ಊಟ ಮುಗಿಸಿ ಬಹಿರ್ದೆಸೆಗೆಂದು ಮನೆಯಿಂದ ಹೊರ ಬಂದಾಗ ಚಿರತೆ ದಾಳಿ ನಡೆಸಿದೆ. ದಾಳಿಯ ವೇಳೆ ಕೂಗಿಕೊಂಡಿದ್ದರಿಂದ ಚಿರತೆ ಪರಾರಿಯಾಗಿದ್ದು ಗಾಯಾಳುಗಳನ್ನು ರಕ್ಷಣೆ ಮಾಡಿ, ತುಮಕೂರಿನ ಸಿದ್ದಾರ್ಥ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.

ಚಿರತೆ ದಾಳಿಯಿಂದ ಸ್ಥಳೀಯ ಗ್ರಾಮಸ್ಥರು ಆತಂಕದಲ್ಲಿದ್ದು, ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯನ್ನು ಹಿಡಿಯಬೇಕೆಂದು ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ನವೀನ್ ಗೌಡ ಆಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News