ತುಮಕೂರು: ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿ ಶೀಟರ್ ನ ಕಾಲಿಗೆ ಗುಂಡಿಕ್ಕಿ ಬಂಧನ

Update: 2024-01-07 04:27 GMT

ಸಾಂದರ್ಭಿಕ ಚಿತ್ರ

ತುಮಕೂರು, ಜ.7: ಪ್ರಕರಣವೊಂದಕ್ಕೆ ಸಂಬಂಧಿಸಿ ಬಂಧಿಸಲು ಹೋಗಿದ್ದ ವೇಳೆ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾದ ಆರೋಪದಲ್ಲಿ ರೌಡಿ ಶೀಟರ್ ಒಬ್ಬನ ಕಾಲಿಗೆ ಗುಂಡಿಕ್ಕಿ ಬಂಧಿಸಿದ ಘಟನೆ ತುಮಕೂರು ನಗರ ಹೊರವಲಯದ ಒಕ್ಕೋಡಿ ಎಂಬಲ್ಲಿ ನಡೆದಿದೆ.

ಮನೋಜ್ ಅಲಿಯಾಸ್ ಮಂಡೇಲಾ ಬಂಧಿತ ಆರೋಪಿ.

ಪೋಲಾಡ್ ಹತ್ಯೆ ಆರೋಪಿ ಶಿವಪ್ರಸಾದ್ ಸ್ನೇಹಿತನಾಗಿದ್ದ ಬಂಡೆ ನಾಗನ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ತುಮಕೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಮನೋಜ್ ಬಂಧನಕ್ಕೆ ಮುಂದಾದ ಪೊಲೀಸರಿಗೆ ಆತ ನಗರದ ಹೊರವಲಯದ ಒಕ್ಕೋಡಿ ಬಳಿ ತಲೆಮರೆಸಿಕೊಂಡಿರುವುದು ತಿಳಿದುಬಂತು. ಅದರಂತೆ ಕಾರ್ಯಪ್ರವೃತ್ತರಾದ ಪೊಲೀಸರ ಆತನ ಬಂಧನಕ್ಕೆ ಮುಂದಾದಾಗ ಏಕಾಏಕಿ ಡ್ರಾಗರ್ ನಿಂದ ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ನಗರ ಠಾಣೆಯ ಇನ್ ಸ್ಪೆಕ್ಟರ್ ದಿನೇಶ್ ಅವರು ಮನೋಜ್ ಕಾಲಿಗೆ ಗುಂಡಿಕ್ಕಿ ವಶಕ್ಕೆ ಪಡೆದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತುಮಕೂರು ನಗರ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದ ಮನೋಜ್ ಅಲಿಯಾಸ್ ಮಂಡೇಲಾ ಹಟ್ಟಿ ಮಂಜ ಕೊಲೆ ಸೇರಿ ಕೊಲೆ ಯತ್ನ ದರೋಡೆ ಪ್ರಕರಣಗಳು ಆತನ ಮೇಲಿವೆ. ಆತನ ವಿರುದ್ಧ ತುಮಕೂರು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮನೋಜ್ ದಾಳಿಯಿಂದ ಹೆಡ್ ಕಾನ್ ಸ್ಟೇಬಲ್ ನಯಾಝ್ ಅವರ ಕೈಗೆ ಗಾಯಗಳಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News