ಪಾವಗಡ: ರಸ್ತೆ ಅಪಘಾತಕ್ಕೆ ಕಾಲೇಜು ವಿದ್ಯಾರ್ಥಿ ಬಲಿ, ಇನ್ನೋರ್ವ ಗಂಭೀರ

Update: 2023-12-18 06:06 GMT

ಪಾವಗಡ, ಡಿ.18: ಬೈಕಿಗೆ ಬೊಲೇರೊ ವಾಹನ ಢಿಕ್ಕಿ ಹೊಡೆದ ಪರಿಣಾಮ ಕಾಲೇಜು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟು, ಇನ್ನೋರ್ವ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಆರ್ಲಹಳ್ಳಿ ಗ್ರಾಮದ ಬಳಿ ಸೋಮವಾರ ಬೆಳಗ್ಗೆ ನಡೆದಿದೆ.

ದೇವರಬೆಟ್ಟ ಗ್ರಾಮದ ನಿವಾಸಿ ನವೀನ್ (21) ಮೃತಪಟ್ಟವರು. ಇವರು ಪಟ್ಟಣದ ವೈ.ಇ.ರಂಗಯ್ಯ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಬಿಕಾಂ ವಿದ್ಯಾರ್ಥಿ. ಜೊತೆಗಿದ್ದ ಇನ್ನೋರ್ವ ಬಿಕಾಂ ವಿದ್ಯಾರ್ಥಿ ಪ್ರಶಾಂತ್ ಎಂಬವರು ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗೆ ತುಮಕೂರಿನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಈ ಇಬ್ಬರು ವಿದ್ಯಾರ್ಥಿಗಳು ಇಂದು ಬೆಳಗ್ಗೆ ಕಾಲೇಜಿಗೆ ತೆರಳುತ್ತಿದ್ದ ಸಂದರ್ಭ ಆರ್ಲಹಳ್ಳಿ ಗ್ರಾಮದ ಬಳಿ ಬೈಕಿಗೆ ಬೊಲೇರೋ ವಾಹನ ಢಿಕ್ಕಿ ಹೊಡೆದಿದೆ.

ಸ್ಥಳಕ್ಕೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News