ತಿಪಟೂರು | ಬಸ್ ಢಿಕ್ಕಿ: ತಾಯಿ-ಮಗಳು ಮೃತ್ಯು, ಮೂವರು ಗಂಭೀರ

Update: 2024-09-09 06:30 GMT

ತುಮಕೂರು, ಸೆ.9: ಬಸ್ ಢಿಕ್ಕಿ ಹೊಡೆದ ಪರಿಣಾಮ ನಡೆದುಕೊಂಡು ಹೋಗುತ್ತಿದ್ದ ತಾಯಿ ಹಾಗೂ ಮಗಳು ಸ್ಥಳದಲ್ಲೇ ಮೃತಪಟ್ಟು, ಇತರ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಹುಚ್ಚನಹಟ್ಟಿ ರಾಮಶೆಟ್ಟಿಹಟ್ಟಿ ಬಳಿಯ ರಾಷ್ಠಿಯ ಹೆದ್ದಾರಿಯ ಬೈಪಾಸ್ ಬಳಿ ಸೋಮವಾರ ಬೆಳಗ್ಗೆ ನಡೆದಿದೆ.

ರಾಮಶೆಟ್ಟಿಹಳ್ಳಿ ಗ್ರಾಮದ ಕಮಲಮ್ಮ (45), ಅವರ ಪುತ್ರಿ, ಹಳೇಪಾಳ್ಯ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ವೀಣಾ (13) ಮೃತಪಟ್ಟವರು.

ಮೂವರು ಗಾಯಾಳುಗಳನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಾಲು ಮಾಡಲಾಗಿದೆ.

ಈ ಹೆದ್ದಾರಿಯಲ್ಲಿ ಪ್ರತಿ ನಿತ್ಯ ಈ ಬಾರಿ ಅಪಘಾತಗಳು ನಡೆಯುತ್ತಿದ್ದನ್ನು ಖಂಡಿಸಿ ಗ್ರಾಮಸ್ಥರು ರಾಷ್ಟ್ರೀಯ ಹೆದ್ದಾರಿಯ ಅಧಿಕಾರಿಗಳು ಸ್ಥಳಕ್ಕೆ ಬರುವವರೆಗೂ ಮೃತ ದೇಹವನ್ನು ತೆಗೆಯಲು ಬಿಡುವುದಿಲ್ಲ ಎಂದು ಪ್ರತಿಭಟನೆಗೆ ನಿರತರಾಗಿದ್ದಾರೆ. ಸ್ಥಳಕ್ಕೆ ಡಿವೈಎಸ್ ಪಿ, ತಾಲ್ಲೂಕು ದಂಡಾಧಿಕಾರಿ ಭೇಟಿ ನೀಡಿದ್ದಾರೆ.

ಘಟನೆ ಬಗ್ಗೆ ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News