ತುಮಕೂರು | ಶಾಲಾ ವಾಹನಕ್ಕೆ ಬೈಕ್ ಢಿಕ್ಕಿ : ಅಪ್ರಾಪ್ತ ಸವಾರ ಮೃತ್ಯು

Update: 2024-08-17 11:25 GMT
ಸಾಂದರ್ಭಿಕ ಚಿತ್ರ

ತುಮಕೂರು: ಖಾಸಗಿ ಶಾಲಾ ವಾಹನಕ್ಕೆ ಢಿಕ್ಕಿಯಾಗಿ ಬೈಕ್ ಸವಾರ ಅಪ್ರಾಪ್ತ ಬಾಲಕ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದಲ್ಲಿ ವರದಿಯಾಗಿದೆ.

ಅಪಘಾತದಲ್ಲಿ ಸಾವನ್ನಪ್ಪಿರುವ ಬಾಲಕನನ್ನು ತೇಜಸ್(14) ಎಂದು ಗುರುತಿಸಲಾಗಿದೆ. ಗುಬ್ಬಿ ಪಟ್ಟಣದ ವಿನಾಯಕ ನಗರದ ರಸ್ತೆಯಲ್ಲಿ ಶಾಲಾ ವಾಹನ ತೆರಳುತ್ತಿತ್ತು. ಈ ಸಂದರ್ಭದಲ್ಲಿ ಬಾಲಕ ತೇಜಸ್ ಬಸ್‌ಗೆ ಢಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ಹೀಗಾಗಿ ಹಿಂದಿನ ಚಕ್ರಕ್ಕೆ ಸಿಲುಕಿ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಬಾಲಕನ ಮೃತದೇಹವನ್ನು ಗುಬ್ಬಿಯ ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆ ಕುರಿತು ಮಾತನಾಡಿದ ಸರ್ಕಲ್ ಇನ್ಸ್ ಪೆಕ್ಟರ್ ಗೋಪಿನಾಥ್, ಅಪ್ರಾಪ್ತ ಮಕ್ಕಳಿಗೆ ಪೋಷಕರು ವಾಹನಗಳನ್ನು ನೀಡುವುದು ಕಾನೂನುಬಾಹಿರವಾಗಿದೆ. ಹಾಗಾಗಿ ವಾಹನ ಚಾಲನೆಗೆ ಅವಕಾಶ ಮಾಡಿಕೊಟ್ಟ ವಾಹನ ಮಾಲಿಕರ ಮೇಲೆಯೂ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News