ತುಮಕೂರು | ಗಣಪತಿ ಉತ್ಸವಕ್ಕೆ ಹೋಗಬೇಡ ಅಂದಿದ್ದಕ್ಕೆ ಬಾಲಕ ಆತ್ಮಹತ್ಯೆ

Update: 2024-09-13 07:25 GMT

ತುಮಕೂರು : ಪೋಷಕರು ಗಣಪತಿ ಉತ್ಸವಕ್ಕೆ ಹೋಗಬೇಡ ಎಂದು ಹೇಳಿದ್ದಕ್ಕೆ ಬೇಸರಗೊಂಡು 12 ವರ್ಷದ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕು ಹೊನ್ನಯ್ಯನಪಾಳ್ಯದಲ್ಲಿ ಗುರುವಾರ ನಡೆದಿರುವುದಾಗಿ ವರದಿಯಾಗಿದೆ.

ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು ಪುಣ್ಯತಿತ್(12) ಎಂದು ಗುರುತಿಸಲಾಗಿದೆ. ಈತ ಹುಳಿಯಾರಿನ ಖಾಸಗಿ ಶಾಲೆಯಲ್ಲಿ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪುಣ್ಯತೀತ್ ಗಣಪತಿ ಉತ್ಸವಕ್ಕೆ ಹೋಗುವುದಾಗಿ ತಂದೆ-ತಾಯಿಯ ಬಳಿ ಹೇಳಿದ್ದಾನೆ. ಇದಕ್ಕೆ ಪೋಷಕರು ಒಪ್ಪಿಲ್ಲ. ಆದರೂ ಗಣಪತಿ ಉತ್ಸವಕ್ಕೆ ಹೋಗುವುದಾಗಿ ಪಟ್ಟು ಹಿಡಿದಿದ್ದಾನೆ. ಇದಕ್ಕೆ ಪೋಷಕರು ಬೇಡವೆಂದು ಹೇಳಿ, ಮನೆಯಲ್ಲೇ ಇರಬೇಕು ಎಂದು ಹೇಳಿದ್ದಾರೆ ಎನ್ನಲಾಗಿದೆ.

ಇದರಿಂದ ಬೇಸರಗೊಂಡ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.

ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News