ತುಮಕೂರು: ವಿದ್ಯುತ್‌ ತಂತಿ ತಗುಲಿ ಇಬ್ಬರು ಮೃತ್ಯು

Update: 2024-08-18 05:11 GMT

ತುಮಕೂರು: ವಿದ್ಯುತ್ ಹರಿದು ಇಬ್ಬರು ಯುವಕರು ಮೃತಪಟ್ಟ ಘಟನೆ  ಪಾವಗಡ ತಾಲೂಕಿನ ಟಿ.ಎನ್.ಬೆಟ್ಟದ  ಗ್ರಾಮದ ಬಳಿಯ ಜಮೀನಿನಲ್ಲಿ  ಶುಕ್ರವಾರ ರಾತ್ರಿ ಸಂಭವಿಸಿದೆ.

ಅನಿಲ್ ಕುಮಾರ್ (29) ಮತ್ತು  ಪುಟ್ಟರಾಜು (35) ಮೃತಪಟ್ಟವರು. ಸುಮಾರು ಮೂರು ಎಕರೆ ಜಮೀನಿನಲ್ಲಿ ಶೇಂಗಾ ಬಿತ್ತನೆ ಮಾಡಿದ್ದರಿಂದ ಶುಕ್ರವಾರ ರಾತ್ರಿ ಶೇಂಗಾ ಬೆಳೆ ಕಾವಲಿಗಾಗಿ ಜಮೀನಿಗೆ ಹೋಗಿದ್ದಾರೆ. ಕಾಡು ಹಂದಿ, ಕರಡಿ ಬಾರದಂತೆ ಅಳವಡಿಸಿದ್ದ ವಿದ್ಯುತ್ ತಂತಿ ತಗುಲಿ ಪುಟ್ಟರಾಜು ಮೃತಪಟ್ಟಿದ್ದಾರೆ. ಪುಟ್ಟರಾಜು ಅವರನ್ನು ಕಾಪಾಡಲು ಯತ್ನಿಸಿದ ಅನಿಲ್ ಅವರಿಗೂ ತಂತಿ ತಗುಲಿ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಮಾಹಿತಿ ತಿಳಿದ ಕೂಡಲೇ ಪಾವಗಡ, ಅರಸೀಕೆರೆ ಪೊಲೀಸ್ ಠಾಣೆ ಸಬ್‌ಇನ್ಸ್ಪೆಕ್ಟರ್ ತಾರಾಸಿಂಗ್ ಮತ್ತು ಮುಖ್ಯಪೇದೆ ಸಿದ್ದೇಶ್ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ಮೃತ ದೇಹ ಸಾಗಿಸಿದ್ದಾರೆ.

ಸ್ಥಳಕ್ಕೆ ಬೆಸ್ಕಾಂ ಇಲಾಖೆಯ ಸಿಬ್ಬಂದಿಗಳು ಧಾವಿಸಿ ಅನಾಹುತದ ಬಗ್ಗೆ ಮಾಹಿತಿ ಪಡೆದಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News