ತುಮಕೂರು: ವಿದ್ಯುತ್ ತಂತಿ ತಗುಲಿ ಮಹಿಳೆ ಮೃತ್ಯು

Update: 2024-09-15 07:01 GMT

ತುಮಕೂರು: ಮನೆಯ ಮೇಲೆ ಹಾದು ಹೋಗಿರುವ ವಿದ್ಯುತ್ ತಂತಿ ತಗುಲಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಕೊತ್ತೂರು ಗ್ರಾಮದಲ್ಲಿ ನಡೆದಿದೆ.

ತ್ರಿವೇಣಿ (30) ಮೃತ ಮಹಿಳೆ. ಕೊತ್ತೂರು ಗ್ರಾಮದಲ್ಲಿ ತನ್ನ ತಂದೆ ಹೊಸದಾಗಿ ಮನೆ ನಿರ್ಮಿಸಿದ್ದ ಮನೆಯ  ಗೃಹ ಪ್ರವೇಶ ಕಾರ್ಯಕ್ರಮಕ್ಕೆ ಬಂದಾಗ ಕೆಳಗೆ ಇದ್ದ ಕಬ್ಬಿಣದ ರಾಡುಗಳನ್ನು ಮನೆಯ ಮೇಲೆಕ್ಕೆ ತೆಗೆದುಕೊಂಡು ಹೋಗುವ ಸಮಯದಲ್ಲಿ ಮನೆಯ ಮೇಲೆ ಹಾದುಹೋಗಿದ್ದ ವಿದ್ಯುತ್ ಲೈನ್ ತಗಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮನೆ ಮೇಲೆ ಹಾದು ಹೋಗಿರುವ ವಿದ್ಯುತ್ ಲೈನ್ ಅನ್ನು ತೆರೆವುಗೊಳಿಸುವಂತೆ ವಿದ್ಯುತ್ ಇಲಾಖೆಯವರಿಗೆ ಬಹಳಷ್ಟು ಸಾರಿ ಮನವಿ ಮಾಡಿದ್ದರೂ ಸಹ ತೆರವುಗೊಳಿಸದೆ ಇದ್ದರಿಂದ ಈ ಅವಘಡ ಸಂಭವಿಸಿದೆ ಎಂದು ಮೃತ ಮಹಿಳೆಯ ಕುಟುಂಬದ ಸದಸ್ಯರು ಆರೋಪಿಸಿದ್ದಾರೆ.

ಶಾಸಕ ಎಚ್.ವಿ. ವೆಂಕಟೇಶ್ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಮೃತದೇಹದ ಅಂತಿಮ ದರ್ಶನ ಪಡೆದು ಮೃತರ ಕುಟುಂಬದವರಿಗೆ ಧರ್ಯ ತುಂಬಿದರು. ಜೊತೆಗೆ ತಾಯಿಯನ್ನು ಕಳೆದುಕೊಂಡಿದ್ದ ಮಗುವನ್ನು ಎತ್ತಿಕೊಂಡು ಭಾವುಕರಾದರು. ಮೃತ ಮಹಿಳೆಯ ಸರ್ಕಾರದಿಂದ ಹಣ ಕೊಡಿಸುವ ಭರವಸೆ ನೀಡಿದರು ಎಂದು ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News