ಕೈಮಗ್ಗಗಳ ಪುನಶ್ಚೇತನಕ್ಕೆ ನಬಾರ್ಡ್‌ನಿಂದ 14.70 ಲಕ್ಷ ರೂ. ಮಂಜೂರು

Update: 2023-08-09 13:39 GMT

ಉಡುಪಿ, ಆ.9: ಉಡುಪಿ ಕೈಮಗ್ಗ ಮತ್ತು ಉಡುಪಿ ಸೀರೆಗಳ ಪುನಶ್ಚೇತನ ಕ್ಕಾಗಿ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿ ವೃದ್ಧಿ ಬ್ಯಾಂಕ್ (ನಬಾರ್ಡ್) ನಿಂದ 180 ದಿನಗಳವರೆಗೆ 30 ಗ್ರಾಮೀಣ ಮಹಿಳೆಯರಿಗೆ ಒಂದು ಬ್ಯಾಚ್‌ನ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮವನ್ನು ನಡೆಸಲು 14.70 ಲಕ್ಷ ರೂ. ಅನುದಾನವನ್ನು ಮಂಜೂರು ಮಾಡಲಾಗಿದೆ.

ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಅಂಗವಾಗಿ ಪದ್ಮಶಾಲಿ ನೇಕಾರ ಪ್ರತಿಷ್ಠಾನ ಉಡುಪಿ ಮತ್ತು ಉಡುಪಿ ಮತ್ತು ದ.ಕ ಜಿಲ್ಲೆಯ ಪ್ರಾಥಮಿಕ ನೇಕಾರರ ಸೇವಾ ಸಹಕಾರ ಸಂಘಗಳ ಸಹಭಾಗಿತ್ವದಲ್ಲಿ ಉಡುಪಿಯ ಪೂರ್ಣಪ್ರಜ್ಞಾ ಸಭಾಂಗಣದಲ್ಲಿ ಆಯೋಜನೆಗೊಂಡಿದ್ದ ಕೈಮಗ್ಗ ಸೀರೆಗಳ ಉತ್ಸವದಲ್ಲಿ ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ರತ್ನಾಕರ್ ಇಂದ್ರಾಳಿ ಹಾಗೂ ಸಿಇಒ ದಿನೇಶ್ ಕುಮಾರ್ ಅವರಿಗೆ ನಬಾರ್ಡ್ ಡಿಡಿಎಂ ಸಂಗೀತಾ ಎಸ್.ಕರ್ತಾ ಅವರು ಮಂಜೂರಾತಿ ಪತ್ರವನ್ನು ಹಸ್ತಾಂತರಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News