ಅ.16: ಕಟ್ಟಡ ಕಾರ್ಮಿಕರಿಂದ ಧರಣಿ

Update: 2024-10-13 12:14 GMT

ಉಡುಪಿ, ಅ.13: ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಅವ್ಯವಸ್ಥೆ, ಶೈಕ್ಷಣಿಕ ಧನಸಹಾಯ ಬಿಡುಗಡೆ, ಪಿಂಚಣಿ ಸಮಸ್ಯೆ ಪರಿಹರಿಸಲು ಹಾಗೂ ಕೇಂದ್ರ ಸರಕಾರ ಬಿಓಸಿಡಬ್ಲ್ಯು ಕಾಯಿದೆ ಹಾಗೂ 1996 ಸೆಸ್ ಕಾನೂನು ರದ್ದತಿ ವಿರೋಧಿಸಿ ಹಾಗೂ ಇತರೆ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್(ಸಿಐಟಿಯು) ನೇತೃತ್ವದಲ್ಲಿ ಅ.16ರಂದು ಬೆಳಗ್ಗೆ 10.30ಕ್ಕೆ ಕುಂದಾಪುರ ತಹಶೀಲ್ದಾರ್ ಕಚೇರಿ ಎದುರು ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಅಧ್ಯಕ್ಷ ಸುರೇಶ್ ಕಲ್ಲಾಗರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News