ಅ.16ರಂದು ‘ಕಬ್ಬದುಳುಮೆ’ ಹಳೆಗನ್ನಡ ಕಾವ್ಯದೋದು ಕಮ್ಮಟ

Update: 2024-10-15 14:17 GMT

ಉಡುಪಿ, ಅ.15: ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಐಕ್ಯೂಎಸಿ ಮತ್ತು ಕನ್ನಡ ವಿಭಾಗ ಗಳ ಜಂಟಿ ಆಶ್ರಯದಲ್ಲಿ ಪ್ರಥಮ ಕನ್ನಡ ಎಂ.ಎ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಕಬ್ಬ ದುಳುಮೆ ಹಳೆಗನ್ನಡ ಕಾವ್ಯದೋದು ಕಮ್ಮಟವೊಂದು ನಾಳೆ ಅ.16ರಂದು ಬೆಳಗ್ಗೆ 10:30ಕ್ಕೆ ತೆಂಕನಿಡಿಯೂರು ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.

ಕಮ್ಮಟವನ್ನು ಮಂಗಳೂರು ವಿವಿಯ ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕ ಪ್ರೊ. ನಾಗಪ್ಪ ಗೌಡ ಉದ್ಘಾಟಿ ಸಲಿದ್ದು, ಕಾಲೇಜಿನ ಪ್ರಾಂಶುಪಾಲ ಪ್ರೊ. ಸುರೇಶ್ ರೈ ಕೆ ಅಧ್ಯಕ್ಷತೆ ವಹಿಸಲಿದ್ದಾರೆ. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ.ಜಯಪ್ರಕಾಶ್ ಶೆಟ್ಟಿ ಹೆಚ್, ಕನ್ನಡ ಸಹಾಯಕ ಪ್ರಾಧ್ಯಾಪಕಿ ರತ್ನಮಾಲಾ, ಐಕ್ಯೂಎಸಿ ಸಂಚಾಲಕಿ ಡಾ. ಮೇವಿ ಮಿರಾಂಡಾ ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News