ಅ.22ರಂದು ಸಹಬಾಳ್ವೆ ಉಡುಪಿ ನೇತೃತ್ವದಲ್ಲಿ ಧರಣಿ

Update: 2024-10-21 15:37 GMT

ಉಡುಪಿ, ಅ.21: ಧೀಮಂತ ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣ ದಲ್ಲಿ ಜಾಮೀನಿನ ಮೇಲೆ ಹೊರ ಬಂದ ಆರೋಪಿ ಗಳಾದ ಪರಶುರಾಮ್ ವಾಗ್ಮೊರೆ ಮತ್ತು ಮನೋಹರ ಯವ್ಡೆ ಅವರನ್ನು ಸನ್ಮಾನಿಸಿದವರ ಮೇಲೆ ಸರಕಾರ ಕೂಡಲೇ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಸಹಬಾಳ್ವೆ ಉಡುಪಿ ನೇತೃತ್ವದಲ್ಲಿ ಅ.22ರಂದು ಸಂಜೆ 5.30ಕ್ಕೆ ಅಜ್ಜರ ಕಾಡು ಹುತಾತ್ಮ ಸ್ಮಾರಕದ ಎದುರು ಧರಣಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಹಬಾಳ್ವೆಯ ಪ್ರಧಾನ ಸಂಚಾಲಕ ಕೆ.ಫಣಿರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News