ಸೆ.29ರಂದು ಉಡುಪಿ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ

Update: 2024-09-27 15:52 GMT

ಕುಂದಾಪುರ, ಸೆ.27: ಉಡುಪಿ ಜಿಲ್ಲಾ ಎಸ್‌ಡಿಎಂಸಿ ಸಮನ್ವಯ ಕೇಂದ್ರ ವೇದಿಕೆ, ಕುಂದಾಪುರ ತಾಲೂಕು ಕಾನೂನು ಸೇವೆಗಳ ಸಮಿತಿ ವತಿಯಿಂದ ನೀಡುವ 2024-25ನೇ ಸಾಲಿನ ಉಡುಪಿ ಜಿಲ್ಲಾ ಮಟ್ಟದ ಸರಕಾರಿ ಶಾಲೆಗಳ ಅಭಿವೃದ್ಧಿ ಹರಿಕಾರ ಪ್ರಶಸ್ತಿ ಮತ್ತು ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಹಾಗೂ ಜಿಲ್ಲಾ ಮಟ್ಟದ ಅತ್ಯುತ್ತಮ ಶಾಲೆ ಮತ್ತು ಎಸ್‌ಡಿಎಂಸಿ ಪ್ರಶಸ್ತಿ ಪ್ರಧಾನ ಸಮಾರಂಭ ಮತ್ತು ಗುರುವಂದನಾ ಕಾರ್ಯಕ್ರಮ ಕುಂಭಾಶಿಯ ಆನೆಗುಡ್ಡೆ ದೇವಸ್ಥಾನದ ಬಳಿಯ ವಿನಾಯಕ ಸಭಾಭವನದಲ್ಲಿ ಸೆ.29ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ.

ಪ್ರಶಸ್ತಿಗೆ ಆಯ್ಕೆಯಾದ ಸರಕಾರಿ ಶಾಲೆಗಳ ಎಸ್‌ಡಿಎಂಸಿ ಮತ್ತು ಅತ್ಯುತ್ತಮ ಶಿಕ್ಷಕರನ್ನು ಜಿಲ್ಲಾ ನ್ಯಾಯಾಧೀಶರು ಗೌರವಿಸಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಮಟ್ಟದ ಸರಕಾರಿ ಶಾಲೆಗಳ ಅಭಿವೃದ್ಧಿ ಹರಿಕಾರ ಪ್ರಶಸ್ತಿಗೆ ಆಯ್ಕೆಯಾದ ಆನಂದ್ ಕುಂದರ್ ಹಾಗೂ ಸರಕಾರಿ ಶಾಲೆಗಳಲ್ಲಿ ನೀಡಿದ ಜೀವಮಾನದ ವಿಶೇಷ ಸೇವೆಯನ್ನು ಗುರುತಿಸಿ ಕಾರ್ಕಳ ತಾಲೂಕಿನ ನಿವೃತ್ತ ಶಿಕ್ಷಕಿ ಸುಮನ ಕಲ್ಯಾ ಅವರಿಗೆ ಗುರುವಂದನೆ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಎಸ್.ಡಿ.ಎಂ.ಸಿ ಸಮನ್ವಯ ಕೇಂದ್ರ ವೇದಿಕೆಯ ಪ್ರಕಟಣೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News