33 ವರ್ಷಗಳ ಹಳೆಯ ಪ್ರಕರಣದ ಆರೋಪಿ ಸೆರೆ
Update: 2024-09-23 15:11 GMT
ಉಡುಪಿ, ಸೆ.23: ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸುಮಾರು 33ವರ್ಷಗಳ ಹಳೆ ಪ್ರಕರಣದಲ್ಲಿ ತಲೆಮರೆಸಿ ಕೊಂಡಿದ್ದ ಆರೋಪಿಯನ್ನು ಪೊಲೀಸರು ಸೆ.21ರಂದು ಮಂಗಳೂರಿನ ಮಾರುಕಟ್ಟೆಯಲ್ಲಿ ಬಂಧಿಸಿದ್ದಾರೆ.
ಕಾರ್ಕಳ ರೆಂಜಾಳ ನಿವಾಸಿ ಬಶೀರ್ ಬಂಧಿತ ಆರೋಪಿ. ಈತ ಪ್ರಕರಣವೊಂದಕ್ಕೆ ಸಂಬಂಧಿಸಿ ಕಳೆದ ಸುಮಾರು 33 ವಷಗಳಿಂದ ತಲೆಮರೆಸಿ ಕೊಂಡಿದ್ದ ಈತನನ್ನು ಠಾಣಾ ಸಿಬಂದಿ ಸುರೇಶ್, ಹೇಮಂತ್ ಕುಮಾರ್, ಶಿವಕುಮಾರ್ ಮತ್ತು ಗಡ್ಡಯ್ಯ ಹಿರೇಮಠ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.