ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು

Update: 2023-09-25 15:00 GMT

ಹೆಬ್ರಿ: ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಬೇಳಂಜೆ ಗ್ರಾಮದ ಈಶ್ವರ ನಗರ ಎಂಬಲ್ಲಿ ಸೆ.24ರಂದು ರಾತ್ರಿ ವೇಳೆ ನಡೆದಿದೆ.

ಮೃತರನ್ನು ವಿಷ್ಣುಮೂರ್ತಿ(48) ಎಂದು ಗುರುತಿಸಲಾಗಿದೆ. ಕೆಲಸ ಮಾಡಿ ಕೊಂಡಿದ್ದ ಇವರು ರಾತ್ರಿ ಬೈಕಿನಿಂದ ಬಿದ್ದು ಗಾಯಗೊಂಡಿದ್ದು, ಸ್ನಾನ ಮಾಡಲು ಮನೆಯ ಅಂಗಳದಲ್ಲಿರುವ ಆವರಣವಿಲ್ಲದ ಬಾವಿಯ ಬಳಿ ಹೋಗಿದ್ದರು. ಅಲ್ಲಿ ಪಂಪ್‌ನಲ್ಲಿ ನೀರು ಬಾರದಕ್ಕೆ ಬಾವಿಯ ನೀರಿನ ಒಳಗೆ ಇದ್ದ ಫುಟ್ ಬಾಲ್ ಎತ್ತಿ ನೋಡಲು ಹೋದರು. ಈ ವೇಳೆ ಅವರು ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟರು. ನಂತರ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹವನ್ನು ಮೇಲಕ್ಕೆ ಎತ್ತಿದರು.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News