ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2023-09-26 16:12 GMT

ಉಡುಪಿ, ಸೆ.26: ವೈಯಕ್ತಿಕ ಕಾರಣದಿಂದ ಮನನೊಂದ 76-ಬಡಗುಬೆಟ್ಟು ಗ್ರಾಮದ ಕುಕ್ಕಿಕಟ್ಟೆ 4ನೇ ಅಡ್ಡರಸ್ತೆಯ ನಿವಾಸಿ ಪ್ರಶಾಂತ(23) ಎಂಬವರು ಸೆ.26ರಂದು ಬೆಳಗ್ಗೆ ಮನೆಯ ಹೊರಗಿನ ಜಗುಲಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಣಿಪಾಲ: ವೈಯಕ್ತಿಕ ಕಾರಣದಿಂದ ಮನನೊಂದ ಶಿವಳ್ಳಿ ಗ್ರಾಮದ ನಿವಾಸಿ ನಾರಾಯಣ(56) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಸೆ.25ರಂದು ಮಧ್ಯಾಹ್ನ ಮನೆಯ ತಾರಸಿಯ ಹುಕ್ಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News