ಪ್ರತ್ಯೇಕ ಪ್ರಕರಣ: ಇಬ್ಬರು ಆತ್ಮಹತ್ಯೆ

Update: 2023-09-09 21:25 IST
ಪ್ರತ್ಯೇಕ ಪ್ರಕರಣ: ಇಬ್ಬರು ಆತ್ಮಹತ್ಯೆ
  • whatsapp icon

ಗಂಗೊಳ್ಳಿ, ಸೆ.9: ಗರ್ಭಕೋಶ ಕ್ಯಾನ್ಸರ್‌ನಿಂದ ಬಳಲುತಿದ್ದು ಕುಂದಾಪುರ ಮತ್ತು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಗುಣಮುಖವಾಗದ ಚಿಂತೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡ ಸುಶೀಲ (52) ಎಂಬವರು ಬೈಂದೂರು ತಾಲೂಕು ನಾಡ ಗ್ರಾಮದ ತೆಂಕಬೈಲು ಗೋಳಿಹಕ್ಲುನ ತಮ್ಮ ಮನೆಯ ಸಮೀಪದ ಗೇರುಮರದ ಕೊಂಬೆಗೆ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ: ಅನಾರೋಗ್ಯ ಪೀಡಿತ ತಾಯಿಯ ಆರೈಕೆಯಲ್ಲಿದ್ದ ಮಗ ಹರೀಶ್ (42), ಅನಾರೋಗ್ಯ ಉಲ್ಬಣಿಸಿದ್ದರಿಂದ ಮನನೊಂದು ಆ.13ರಂದು ಸೂಡ ಗ್ರಾಮದ ಪಿಲಾರ್‌ಖಾನ್‌ನ ಬೊಬ್ಬರ್ಯ ಪಾದೆಯ ಬಳಿ ಇರುವ ಮನೆಯ ಸಮೀಪದ ಹಾಡಿಯಲ್ಲಿ  ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದು, ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿ ತುರ್ತು ನಿಗ ಘಟಕದಲ್ಲಿ ಚಿಕಿತ್ಸೆಯಲ್ಲಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಸೆ.8ರಂದು ಮೃತಪಟ್ಟಿದ್ದಾರೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News